23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ R15 ಮಾದರಿಯ ಮೋಟಾರ್‌ ಸೈಕಲ್‌ ನ್ನು ಯಾರೋ ಕಳ್ಳರು ಕಳವುಗೈದ ಪ್ರಕರಣ ಫೆ.15ರಂದು ವರದಿಯಾಗಿದೆ.

ಕೂತ್ಕುಂಜ ಗ್ರಾಮ ಸುಳ್ಯ ನಿವಾಸಿ ಅಖಿಲೇಶ್, ಎಸ್.(31) ಎಂಬವರ ದೂರಿನಂತೆ, ಫೆ.14 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆ ಎಂಬಲ್ಲಿರುವ ಚಿಕ್ಕಮ್ಮನ ಮನೆಗೆ ಹೋಗಿದ್ದು ನೆರೆಮನೆಯ ರಾಜಪ್ಪ ಗೌಡರ ಮನೆ ಶೆಡ್ಡಿನಲ್ಲಿ, ತನ್ನ ಬಾಬ್ತು KA-21-Y-0967 ನೇ ನೋಂದಣಿ ಸಂಖ್ಯೆಯ YAMAHA ಕಂಪನಿಯ R15 ಮಾದರಿಯ ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋಗಿದ್ದು, ಮರುದಿನ ಫೆ.15 ರಂದು ಬೆಳಿಗ್ಗೆ ಊರಿಗೆ ವಾಪಾಸ್ಸು ಹೋಗಲು ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳಕ್ಕೆ ಹೋಗಿ ನೋಡಿದಾಗ ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳದಲ್ಲಿ ಕಾಣದಿದ್ದು, ಅಖಿಲೇಶ್ ರವರು ಮನೆಯ ಸುತ್ತಮುತ್ತ ವಠಾರದಲ್ಲಿ ಹುಡುಕಾಡಿ ಪತ್ತೆಯಾಗದಿದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 65000/ -ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 09/2024 ಕಲಂ: 379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!