July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ R15 ಮಾದರಿಯ ಮೋಟಾರ್‌ ಸೈಕಲ್‌ ನ್ನು ಯಾರೋ ಕಳ್ಳರು ಕಳವುಗೈದ ಪ್ರಕರಣ ಫೆ.15ರಂದು ವರದಿಯಾಗಿದೆ.

ಕೂತ್ಕುಂಜ ಗ್ರಾಮ ಸುಳ್ಯ ನಿವಾಸಿ ಅಖಿಲೇಶ್, ಎಸ್.(31) ಎಂಬವರ ದೂರಿನಂತೆ, ಫೆ.14 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆ ಎಂಬಲ್ಲಿರುವ ಚಿಕ್ಕಮ್ಮನ ಮನೆಗೆ ಹೋಗಿದ್ದು ನೆರೆಮನೆಯ ರಾಜಪ್ಪ ಗೌಡರ ಮನೆ ಶೆಡ್ಡಿನಲ್ಲಿ, ತನ್ನ ಬಾಬ್ತು KA-21-Y-0967 ನೇ ನೋಂದಣಿ ಸಂಖ್ಯೆಯ YAMAHA ಕಂಪನಿಯ R15 ಮಾದರಿಯ ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋಗಿದ್ದು, ಮರುದಿನ ಫೆ.15 ರಂದು ಬೆಳಿಗ್ಗೆ ಊರಿಗೆ ವಾಪಾಸ್ಸು ಹೋಗಲು ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳಕ್ಕೆ ಹೋಗಿ ನೋಡಿದಾಗ ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳದಲ್ಲಿ ಕಾಣದಿದ್ದು, ಅಖಿಲೇಶ್ ರವರು ಮನೆಯ ಸುತ್ತಮುತ್ತ ವಠಾರದಲ್ಲಿ ಹುಡುಕಾಡಿ ಪತ್ತೆಯಾಗದಿದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 65000/ -ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 09/2024 ಕಲಂ: 379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya
error: Content is protected !!