30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

ಕೊಕ್ಕಡ: ಕೊಕ್ಕಡ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಥಾ ರಥವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿರವರು ಹಾಗೂ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ನಾಯ್ಕ್ ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಲಾಯಿತು.

ಶ್ರೀ ರಾಮ ಭಜನಾ ಮಂದಿರ ಕೊಕ್ಕಡ ದ ಬಳಿಯಿಂದ, ಕೊಕ್ಕಡ ಸರಕಾರಿ ಪ್ರೌಢಶಾಲಾ ಮಕ್ಕಳಿಂದ ವಾದ್ಯ ಘೋಷಗಳೊಂದಿಗೆ ಹಾಗೂ ಪೂರ್ಣ ಕುಂಭ ಕಲಶಗಳೊಂದಿಗೆ ಮೆರವಣಿಗೆ ಮೂಲಕ ಕೊಕ್ಕಡ ಅಮೃತ ಗ್ರಾಮ ಪಂಚಾಯುತ್ ವರೆಗೆ ಕರೆತರಲಾಯಿತು.

ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ, ಐ ಇ ಸಿ ಸಂಯೋಜಕರು ,ತಾಲೂಕು ವಲಯ , ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರಕಾರಿ ಪ್ರೌಢಶಾಲಾ ಮುಖ್ಯೋಪಾದ್ಯಾಯರು ಸಹಶಿಕ್ಷರು , ಶಾಲಾ ಮಕ್ಕಳು ,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು ,ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು/ ಪದಾದಿಕಾರಿಗಳು . ಮೇಲ್ವಿಚಾರಕರು ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಕೊಕ್ಕಡ ವಿಭಾಗ ,ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ, ಭಾಷಣ ಮತ್ತು ಚಿತ್ರಕಲೆ ಸ್ಪರ್ದೆಯನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Related posts

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!