ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಕೊಕ್ಕಡ: ಕೊಕ್ಕಡ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಥಾ ರಥವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿರವರು ಹಾಗೂ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ನಾಯ್ಕ್ ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಲಾಯಿತು.

ಶ್ರೀ ರಾಮ ಭಜನಾ ಮಂದಿರ ಕೊಕ್ಕಡ ದ ಬಳಿಯಿಂದ, ಕೊಕ್ಕಡ ಸರಕಾರಿ ಪ್ರೌಢಶಾಲಾ ಮಕ್ಕಳಿಂದ ವಾದ್ಯ ಘೋಷಗಳೊಂದಿಗೆ ಹಾಗೂ ಪೂರ್ಣ ಕುಂಭ ಕಲಶಗಳೊಂದಿಗೆ ಮೆರವಣಿಗೆ ಮೂಲಕ ಕೊಕ್ಕಡ ಅಮೃತ ಗ್ರಾಮ ಪಂಚಾಯುತ್ ವರೆಗೆ ಕರೆತರಲಾಯಿತು.

ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ, ಐ ಇ ಸಿ ಸಂಯೋಜಕರು ,ತಾಲೂಕು ವಲಯ , ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರಕಾರಿ ಪ್ರೌಢಶಾಲಾ ಮುಖ್ಯೋಪಾದ್ಯಾಯರು ಸಹಶಿಕ್ಷರು , ಶಾಲಾ ಮಕ್ಕಳು ,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು ,ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು/ ಪದಾದಿಕಾರಿಗಳು . ಮೇಲ್ವಿಚಾರಕರು ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಕೊಕ್ಕಡ ವಿಭಾಗ ,ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ, ಭಾಷಣ ಮತ್ತು ಚಿತ್ರಕಲೆ ಸ್ಪರ್ದೆಯನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Leave a Comment

error: Content is protected !!