ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

ಕೊಕ್ಕಡ: ಕೊಕ್ಕಡ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಥಾ ರಥವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿರವರು ಹಾಗೂ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ನಾಯ್ಕ್ ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಲಾಯಿತು.

ಶ್ರೀ ರಾಮ ಭಜನಾ ಮಂದಿರ ಕೊಕ್ಕಡ ದ ಬಳಿಯಿಂದ, ಕೊಕ್ಕಡ ಸರಕಾರಿ ಪ್ರೌಢಶಾಲಾ ಮಕ್ಕಳಿಂದ ವಾದ್ಯ ಘೋಷಗಳೊಂದಿಗೆ ಹಾಗೂ ಪೂರ್ಣ ಕುಂಭ ಕಲಶಗಳೊಂದಿಗೆ ಮೆರವಣಿಗೆ ಮೂಲಕ ಕೊಕ್ಕಡ ಅಮೃತ ಗ್ರಾಮ ಪಂಚಾಯುತ್ ವರೆಗೆ ಕರೆತರಲಾಯಿತು.

ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ, ಐ ಇ ಸಿ ಸಂಯೋಜಕರು ,ತಾಲೂಕು ವಲಯ , ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರಕಾರಿ ಪ್ರೌಢಶಾಲಾ ಮುಖ್ಯೋಪಾದ್ಯಾಯರು ಸಹಶಿಕ್ಷರು , ಶಾಲಾ ಮಕ್ಕಳು ,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು ,ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು/ ಪದಾದಿಕಾರಿಗಳು . ಮೇಲ್ವಿಚಾರಕರು ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಕೊಕ್ಕಡ ವಿಭಾಗ ,ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ, ಭಾಷಣ ಮತ್ತು ಚಿತ್ರಕಲೆ ಸ್ಪರ್ದೆಯನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Related posts

ಕಾರ್ಯತಡ್ಕ ನಿವಾಸಿ ಜೋನ್ ವೆಲ್ಲಂಕಲ್ ನಿಧನ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!