ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ 16/02/2024 ರಂದು ಜೆಸಿಐ ಮಡಂತ್ಯಾರು ವಿಜಯ 2024ರ ಘಟಕಾಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ ಇವರ ನೇತೃತ್ವದಲ್ಲಿ ಪೂರ್ವಾಧ್ಯಕ್ಷರು ಹಾಗೂ ಸದಸ್ಯರಿಂದ ಒಟ್ಟುಗೂಡಿಸಿದ, ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ಪೂರ್ವಾಧ್ಯಕ್ಷರಾದ ಜೇಸಿ ನವೀನ್ ಕೊಡ್ಲಕ್ಕೆ, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ ಕಡ್ತಿಲ, ಜೇಸಿ ರೂಪ ನವೀನ್, ಜೇಸಿ ಅಜಯ್ ಜೆ. ಶೆಟ್ಟಿ, ಜೇಸಿ ಶರತ್ ಕುಮಾರ್ ಹಟ್ಟತ್ತೋಡಿ ಹಾಗೂ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Leave a Comment

error: Content is protected !!