‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇವರ ಸಹಕಾರದೊಂದಿಗೆ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಇವರ ನೇತೃತ್ವದಲ್ಲಿ “ಬೆಳ್ತಂಗಡಿ ಸಂಭ್ರಮ” ಫೆ.17ರಂದು ಮಾರಿಗುಡಿ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಮಂಗಳೂರು ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತ ಅಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ದೀಪ ಪ್ರಜ್ವಲನೆ ಗೊಳಿಸಿದರು.

ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿದರು. ರಾಜಕೇಸರಿ ಸಂಸ್ಥಾಪಕರಾದ ದೀಪಕ್ ಅಧ್ಯಕ್ಷತೆಯನ್ನು ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಚೈತ್ರೇಶ್, ವಿಜಯವಾಣಿ ವರದಿಗಾರ ಮನೋಹರ್ ಬಳಂಜ, ಹೊಸಂಗಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಗಣೇಶ್ ಶೆಟ್ಟಿ, ಉಜಿರೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಅಗ್ನಿಶಾಮಕ ತುರ್ತುಸೇವೆ ಬೆಳ್ತಂಗಡಿಯ ಉಸ್ಮಾನ್, ತಾಲೂಕು ಕಾರ್ಯಕ್ರಮದ ವ್ಯವಸ್ಥಾಪಕ ತಾಲೂಕು ಆಸ್ಪತ್ರೆ ಅಜಯ್ ಕಲ್ಲೆಗ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್, ಸಾನಿಧ್ಯ ಟ್ರಸ್ಟ್ ಮಹಮ್ಮದ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪುಣ್ಯ ಕೋಟ್ಯಾನ್ ನಿರೂಪಿಸಿದರು.

Leave a Comment

error: Content is protected !!