37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಮೊಗ್ರು ಗ್ರಾಮದ ಕೋರಿಯಾರು ಎಂಬಲ್ಲಿ ಯಾರು ಇಲ್ಲದ ವೇಳೆ ಮಾನಸಿಕ ಖಿನ್ನತೆಯಿಂದ ಬಳಲಿ ಹರೀಶ್ ಎಂಬುವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 16 ರಂದು ನಡೆದಿದೆ.ಬಂದಾರು ನಿವಾಸಿ ಹರೀಶ್ ರವರ ಪತ್ನಿ ಲೋಲಾಕ್ಷಿ.ಕೆ.ಎಂ ರವರ ದೂರಿನಂತೆ ಹರೀಶ್ ರವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದವರು, ಕೊರೋನ ಅವಧಿ ಬಳಿಕ ಊರಿಗೆ ಬಂದು ಪದ್ಮುಂಜದ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದು, ಲೋಲಾಕ್ಷಿ ಅವರ ತವರು ಮನೆಯಲ್ಲಿದ್ದು, ಹರೀಶ್‌ ರವರು ತಾಯಿ ಮನೆಯಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಕೋರಿಯಾರು ಎಂಬಲ್ಲಿದ್ದು, ಆಗಾಗ ಪತ್ನಿ ಮನೆಗೆ ಬಂದು ಹೋಗುತ್ತಿದ್ದವರು ಫೆ.15 ರಂದು ಕೆಲಸಕ್ಕೆ ಹೋಗದೆ ಮಧ್ಯಾಹ್ನ ವೇಳೆಗೆ ಪತ್ನಿ ಮನೆಗೆ ಬಂದು ಹೋಗಿದ್ದು ಬಳಿಕ ಅವರ ತಾಯಿ ಮನೆಯಲ್ಲೆ ಇದ್ದವರು ಫೆ. 16 ರಂದು ಬೆಳಗ್ಗೆ ಹರೀಶರವರ ತಾಯಿ ಭವಾನಿ ಮತ್ತು ಅತ್ತಿಗೆ ಉಮಾ ರವರು ತೋಟಕ್ಕೆ ಕೆಲಸಕ್ಕೆ ಹೋದ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಲ್ಲಿ ಹರೀಶ್ ಮಲಗುವ ಕೋಣೆಯಲ್ಲಿ ಮಾಡಿನ ಕಬ್ಬಿಣದ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಸಮಯದ ಹಿಂದೆ ಹರೀಶ್‌ ರವರು ಖರೀದಿ ಮಾಡಿದ ಜಮೀನಿನ ದಾಖಲೆ ಪತ್ರ ಸರಿ ಇಲ್ಲವೆಂದು ಮತ್ತು ಹರೀಶ್‌ರವರ ಮನೆಯಲ್ಲಿ ಬ್ಯಾಂಕ್ ಲೋನ್ ಮಾಡಿದ ವಿಚಾರದಲ್ಲಿ ತೀವ್ರ ಚಿಂತಿತರಾಗಿ ಖಿನ್ನತೆಯಿಂದ ಇದ್ದವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಯುಡಿಆರ್ ನಂಬ್ರ 04/2024 ಕಲಂ:174 ಸಿ ಆರ್‌ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!