ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಫೆ.16 ರಂದು ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮಮರ್ದಿನಿ ದೇವಸ್ಥಾನದಿಂದ ಆಡಳಿತ ಮೊಕ್ತೇಸರರಾದ ಎಂ. ವಿಠಲ ಶೆಟ್ಟಿ ಮೂಡಯೂರು ಇವರ ನೇತೃತ್ವದಲ್ಲಿ ಭಕ್ತಾಭಿಮಾನಿಗಳಿಂದ ಒಟ್ಟುಗೂಡಿಸಿದ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೂಪ ನವೀನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕಾಂತಪ್ಪ ಗೌಡ ಹಟ್ಟತ್ತೋಡಿ, ವರ್ತಕ ಬಂಧು ಸಹಕಾರಿ ಸಂಘದ ಅಧ್ಯಕ್ಷ ಬಿ. ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಅರ್ಚಕ ಆದಿತ್ಯ ಎಸ್. ರಾವ್, ಕಿಶೋರ್ ಕುಮಾರ್ ಶೆಟ್ಟಿ ಮೂಡಯೂರು, ದಿನೇಶ್ ಪಾಂಗಳ, ಶ್ರೀಮತಿ ಹೇಮಾವತಿ ಶೆಟ್ಟಿ ಬಂಗೇರಕಟ್ಟೆ, ಕುಮಾರ ನಾಯ್ಕ, ಮಂಜುನಾಥ ಶೆಟ್ಟಿ ಪರನೀರು ಹಾಗೂ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Leave a Comment

error: Content is protected !!