25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ R15 ಮಾದರಿಯ ಮೋಟಾರ್‌ ಸೈಕಲ್‌ ನ್ನು ಯಾರೋ ಕಳ್ಳರು ಕಳವುಗೈದ ಪ್ರಕರಣ ಫೆ.15ರಂದು ವರದಿಯಾಗಿದೆ.

ಕೂತ್ಕುಂಜ ಗ್ರಾಮ ಸುಳ್ಯ ನಿವಾಸಿ ಅಖಿಲೇಶ್, ಎಸ್.(31) ಎಂಬವರ ದೂರಿನಂತೆ, ಫೆ.14 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆ ಎಂಬಲ್ಲಿರುವ ಚಿಕ್ಕಮ್ಮನ ಮನೆಗೆ ಹೋಗಿದ್ದು ನೆರೆಮನೆಯ ರಾಜಪ್ಪ ಗೌಡರ ಮನೆ ಶೆಡ್ಡಿನಲ್ಲಿ, ತನ್ನ ಬಾಬ್ತು KA-21-Y-0967 ನೇ ನೋಂದಣಿ ಸಂಖ್ಯೆಯ YAMAHA ಕಂಪನಿಯ R15 ಮಾದರಿಯ ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋಗಿದ್ದು, ಮರುದಿನ ಫೆ.15 ರಂದು ಬೆಳಿಗ್ಗೆ ಊರಿಗೆ ವಾಪಾಸ್ಸು ಹೋಗಲು ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳಕ್ಕೆ ಹೋಗಿ ನೋಡಿದಾಗ ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳದಲ್ಲಿ ಕಾಣದಿದ್ದು, ಅಖಿಲೇಶ್ ರವರು ಮನೆಯ ಸುತ್ತಮುತ್ತ ವಠಾರದಲ್ಲಿ ಹುಡುಕಾಡಿ ಪತ್ತೆಯಾಗದಿದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 65000/ -ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 09/2024 ಕಲಂ: 379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

Suddi Udaya

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!