25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

ಕೊಕ್ಕಡ: ಕೊಕ್ಕಡ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಥಾ ರಥವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿರವರು ಹಾಗೂ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ನಾಯ್ಕ್ ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಲಾಯಿತು.

ಶ್ರೀ ರಾಮ ಭಜನಾ ಮಂದಿರ ಕೊಕ್ಕಡ ದ ಬಳಿಯಿಂದ, ಕೊಕ್ಕಡ ಸರಕಾರಿ ಪ್ರೌಢಶಾಲಾ ಮಕ್ಕಳಿಂದ ವಾದ್ಯ ಘೋಷಗಳೊಂದಿಗೆ ಹಾಗೂ ಪೂರ್ಣ ಕುಂಭ ಕಲಶಗಳೊಂದಿಗೆ ಮೆರವಣಿಗೆ ಮೂಲಕ ಕೊಕ್ಕಡ ಅಮೃತ ಗ್ರಾಮ ಪಂಚಾಯುತ್ ವರೆಗೆ ಕರೆತರಲಾಯಿತು.

ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ, ಐ ಇ ಸಿ ಸಂಯೋಜಕರು ,ತಾಲೂಕು ವಲಯ , ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರಕಾರಿ ಪ್ರೌಢಶಾಲಾ ಮುಖ್ಯೋಪಾದ್ಯಾಯರು ಸಹಶಿಕ್ಷರು , ಶಾಲಾ ಮಕ್ಕಳು ,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು ,ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು/ ಪದಾದಿಕಾರಿಗಳು . ಮೇಲ್ವಿಚಾರಕರು ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಕೊಕ್ಕಡ ವಿಭಾಗ ,ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ, ಭಾಷಣ ಮತ್ತು ಚಿತ್ರಕಲೆ ಸ್ಪರ್ದೆಯನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Related posts

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!