25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

ಕೊಕ್ಕಡ: ಕೊಕ್ಕಡ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಥಾ ರಥವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿರವರು ಹಾಗೂ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ನಾಯ್ಕ್ ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಲಾಯಿತು.

ಶ್ರೀ ರಾಮ ಭಜನಾ ಮಂದಿರ ಕೊಕ್ಕಡ ದ ಬಳಿಯಿಂದ, ಕೊಕ್ಕಡ ಸರಕಾರಿ ಪ್ರೌಢಶಾಲಾ ಮಕ್ಕಳಿಂದ ವಾದ್ಯ ಘೋಷಗಳೊಂದಿಗೆ ಹಾಗೂ ಪೂರ್ಣ ಕುಂಭ ಕಲಶಗಳೊಂದಿಗೆ ಮೆರವಣಿಗೆ ಮೂಲಕ ಕೊಕ್ಕಡ ಅಮೃತ ಗ್ರಾಮ ಪಂಚಾಯುತ್ ವರೆಗೆ ಕರೆತರಲಾಯಿತು.

ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ, ಐ ಇ ಸಿ ಸಂಯೋಜಕರು ,ತಾಲೂಕು ವಲಯ , ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರಕಾರಿ ಪ್ರೌಢಶಾಲಾ ಮುಖ್ಯೋಪಾದ್ಯಾಯರು ಸಹಶಿಕ್ಷರು , ಶಾಲಾ ಮಕ್ಕಳು ,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು ,ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು/ ಪದಾದಿಕಾರಿಗಳು . ಮೇಲ್ವಿಚಾರಕರು ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಕೊಕ್ಕಡ ವಿಭಾಗ ,ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ, ಭಾಷಣ ಮತ್ತು ಚಿತ್ರಕಲೆ ಸ್ಪರ್ದೆಯನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Related posts

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya
error: Content is protected !!