ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯಿತಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಘನ ಸರ್ಕಾರದ ಆದೇಶದಂತೆ ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಪುಷ್ಪ ನಮನ ಸಲ್ಲಿಸಿದರು

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಅಧೀಕ್ಷಕ ಡಿ.ಪ್ರಶಾಂತ್ ಬಳಂಜ, ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ಪ್ರಭಾರ ನರೇಗಾ ಸಹಾಯಕ ನಿರ್ದೇಶಕರಾದ ಶ್ರೀಮತಿ ಸಫನಾ, ಲೆಕ್ಕ ಶಾಖೆಯ ಕೆ.ಜಯರಾಮ್, ಅಶೋಕ್ ದೇವಾಡಿಗ ,ಆಡಳಿತ ಶಾಖೆಯ ಶ್ರೀಮತಿ ಪ್ರಿಯಾ ಹೆಗ್ಡೆ, ಶ್ರೀಮತಿ ಸುಶೀಲ ಮತ್ತಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

error: Content is protected !!