April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇವರ ಸಹಕಾರದೊಂದಿಗೆ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಇವರ ನೇತೃತ್ವದಲ್ಲಿ “ಬೆಳ್ತಂಗಡಿ ಸಂಭ್ರಮ” ಫೆ.17ರಂದು ಮಾರಿಗುಡಿ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಮಂಗಳೂರು ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತ ಅಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ದೀಪ ಪ್ರಜ್ವಲನೆ ಗೊಳಿಸಿದರು.

ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿದರು. ರಾಜಕೇಸರಿ ಸಂಸ್ಥಾಪಕರಾದ ದೀಪಕ್ ಅಧ್ಯಕ್ಷತೆಯನ್ನು ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಚೈತ್ರೇಶ್, ವಿಜಯವಾಣಿ ವರದಿಗಾರ ಮನೋಹರ್ ಬಳಂಜ, ಹೊಸಂಗಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಗಣೇಶ್ ಶೆಟ್ಟಿ, ಉಜಿರೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಅಗ್ನಿಶಾಮಕ ತುರ್ತುಸೇವೆ ಬೆಳ್ತಂಗಡಿಯ ಉಸ್ಮಾನ್, ತಾಲೂಕು ಕಾರ್ಯಕ್ರಮದ ವ್ಯವಸ್ಥಾಪಕ ತಾಲೂಕು ಆಸ್ಪತ್ರೆ ಅಜಯ್ ಕಲ್ಲೆಗ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್, ಸಾನಿಧ್ಯ ಟ್ರಸ್ಟ್ ಮಹಮ್ಮದ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪುಣ್ಯ ಕೋಟ್ಯಾನ್ ನಿರೂಪಿಸಿದರು.

Related posts

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya
error: Content is protected !!