37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಮೊಗ್ರು ಗ್ರಾಮದ ಕೋರಿಯಾರು ಎಂಬಲ್ಲಿ ಯಾರು ಇಲ್ಲದ ವೇಳೆ ಮಾನಸಿಕ ಖಿನ್ನತೆಯಿಂದ ಬಳಲಿ ಹರೀಶ್ ಎಂಬುವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 16 ರಂದು ನಡೆದಿದೆ.ಬಂದಾರು ನಿವಾಸಿ ಹರೀಶ್ ರವರ ಪತ್ನಿ ಲೋಲಾಕ್ಷಿ.ಕೆ.ಎಂ ರವರ ದೂರಿನಂತೆ ಹರೀಶ್ ರವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದವರು, ಕೊರೋನ ಅವಧಿ ಬಳಿಕ ಊರಿಗೆ ಬಂದು ಪದ್ಮುಂಜದ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದು, ಲೋಲಾಕ್ಷಿ ಅವರ ತವರು ಮನೆಯಲ್ಲಿದ್ದು, ಹರೀಶ್‌ ರವರು ತಾಯಿ ಮನೆಯಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಕೋರಿಯಾರು ಎಂಬಲ್ಲಿದ್ದು, ಆಗಾಗ ಪತ್ನಿ ಮನೆಗೆ ಬಂದು ಹೋಗುತ್ತಿದ್ದವರು ಫೆ.15 ರಂದು ಕೆಲಸಕ್ಕೆ ಹೋಗದೆ ಮಧ್ಯಾಹ್ನ ವೇಳೆಗೆ ಪತ್ನಿ ಮನೆಗೆ ಬಂದು ಹೋಗಿದ್ದು ಬಳಿಕ ಅವರ ತಾಯಿ ಮನೆಯಲ್ಲೆ ಇದ್ದವರು ಫೆ. 16 ರಂದು ಬೆಳಗ್ಗೆ ಹರೀಶರವರ ತಾಯಿ ಭವಾನಿ ಮತ್ತು ಅತ್ತಿಗೆ ಉಮಾ ರವರು ತೋಟಕ್ಕೆ ಕೆಲಸಕ್ಕೆ ಹೋದ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಲ್ಲಿ ಹರೀಶ್ ಮಲಗುವ ಕೋಣೆಯಲ್ಲಿ ಮಾಡಿನ ಕಬ್ಬಿಣದ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಸಮಯದ ಹಿಂದೆ ಹರೀಶ್‌ ರವರು ಖರೀದಿ ಮಾಡಿದ ಜಮೀನಿನ ದಾಖಲೆ ಪತ್ರ ಸರಿ ಇಲ್ಲವೆಂದು ಮತ್ತು ಹರೀಶ್‌ರವರ ಮನೆಯಲ್ಲಿ ಬ್ಯಾಂಕ್ ಲೋನ್ ಮಾಡಿದ ವಿಚಾರದಲ್ಲಿ ತೀವ್ರ ಚಿಂತಿತರಾಗಿ ಖಿನ್ನತೆಯಿಂದ ಇದ್ದವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಯುಡಿಆರ್ ನಂಬ್ರ 04/2024 ಕಲಂ:174 ಸಿ ಆರ್‌ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya
error: Content is protected !!