23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

ಬೆಳ್ತಂಗಡಿ ತಾಲೂಕು ಬಳೆಂಜ ಗ್ರಾಮದ ತೆಂಕಕಾರಂದೂರಿನ ಶ್ರೀ ಪ್ರಶಾಂತ ಹಾಗೂ ಶ್ರೀಮತಿ ಲಾವಣ್ಯ ಅವರ ಎರಡನೇ ಪುತ್ರಿ ,ಏಳು ವರ್ಷ ಪ್ರಾಯದ ಕು.ಮಾನ್ಯ ಹುಟ್ಟಿನಿಂದಲೇ ಬುದ್ದಿಮಾಂದ್ಯ ಹಾಗೂ ವಿಕಲಚೇತನೆ. ಎಲ್ಲಾ ಕೆಲಸಗಳಿಗೂ ಇನ್ನೊಬ್ಬರನ್ನೇ ಅವಲಂಬಿತವಾಗಿರ ಬೇಕಾದಂತಹ ಸನ್ನಿವೇಶ.

ಇಂತಹ ಪರಿಸ್ಥಿತಿ ಯಲ್ಲಿ.ಉಜಿರೆ ಗ್ರಾಮ ಅಂಗವಿಕಲರ ಪುನರ್ವಸತಿ ಕಾರ್ಯಕರ್ತರಾದ ವಿಪುಲ್ ಪೂಜಾರಿ ಅವರ ಮನವಿಗೆ ಕೂಡಲೇ ಸ್ಪಂದಿಸಿದ ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘವು , ಆ ವಿಕಲಚೇತನ ಮಗುವಿಗಾಗಿ ರೂ 19000/- ಮೌಲ್ಯ ದ ವಿಶೇಷ ವೀಲ್ ಚೇರ್ ನ್ನು ಇಂದು ಅವರ ಮನೆಗೆ ಹೋಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಧರ ಕೆ.ವಿ, ಪೂರ್ವಾಧ್ಯಕ್ಷರಾದ ನವೀನ್ ಚಂದ್ರ ಕಜೆಕಾರ್, ಕೋಶಾಧಿಕಾರಿ ಗಣಪತಿ ಭಟ್, ಸಂಚಾಲಕರಾದ ಪ್ರಕಾಶ್ ಹಾಗೂ ಉಜಿರೆ ಗ್ರಾಮ ದ ಅಂಗವಿಕಲರ ಪುನರ್ವಸತಿ ಕಾರ್ಯಕರ್ತ ವಿಪುಲ್ ಪೂಜಾರಿ ಹಾಗೂ ಬಳೆಂಜ ಗ್ರಾಮದ ಪುನರ್ವಸತಿ ಕಾರ್ಯಕರ್ತೆ ಕು.ವಿನೋದ ಇವರುಗಳು ಉಪಸ್ಥಿತರಿದ್ದರು

Related posts

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!