24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿತು.

ಫೆ.18ರಂದು ಅರಸಿನಮಕ್ಕಿಯ ಕೇಂದ್ರ ಮೈದಾನದಿಂದ ಭಕ್ತರು ಶ್ರೀ ಕ್ಷೇತ್ರಕ್ಕೆ ನೀಡಿರುವ ಪೂಜಾ ಪರಿಕರಗಳು, ಶ್ರೀ ದೇವರ ವಿಗ್ರಹ, ಹತ್ಯಡ್ಕ ಗ್ರಾಮಸ್ಥರಿಂದ ಹೊರೆಕಾಣಿಕೆ, ಬ್ರಹ್ಮಕಲಶೋತ್ಸವ ಅನ್ನದಾನಕ್ಕೆ ಭಕ್ತರು ನೀಡಿದ ಅಕ್ಕಿ ಸಮರ್ಪಣೆಯ ವೈಭವದ ಆಕರ್ಷಕ ಮೆರವಣಿಗೆಯು ಶ್ರೀ ಕ್ಷೇತ್ರಕ್ಕೆ ನಡೆಯಿತು.

ಹೊರಕಾಣಿಕೆ ಮೆರವಣಿಗೆಯನ್ನು ಕೊಕ್ಕಡದ ಹಿರಿಯ ವೈದ್ಯರಾದ ಡಾ. ಮೋಹನದಾಸ್ ಗೌಡ ಉದ್ಘಾಟಿಸಿದರು. ಮೆರವಣಿಗೆಯಲ್ಲಿ ಹುಲಿ ಕುಣಿತ, ಭಜನೆ ತಂಡಗಳು ಭಾಗವಹಿಸಿದ್ದವು. ಶ್ರೀ ಕ್ಷೇತ್ರದಲ್ಲಿ ಹೊರೆಕಾಣಿಕೆ, ಪೂಜಾ ಪರಿಕರಗಳಿಗೆ ಪೂಜೆ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ,ಸಂಚಾಲಕ ಬಿ. ಜಯರಾಮ್ ನೆಲ್ಲಿತ್ತಾಯ ಕಾರ್ಯದರ್ಶಿ ಮುರಳೀಧರ ಶೆಟ್ಟಿಗಾರ್, ಅರ್ಚಕ ಉಲ್ಲಾಸ್ ಭಟ್ ಅಂತರ,ಹೊರೆಕಾಣಿಕೆ ಸಮಿತಿ ಸಂಚಾಲಕ ರಾಘವ ಗೌಡ ಮೀಯಾಳ, ಧರ್ಮಸ್ಥಳ ಜಿ. ಪಂ. ಮಾಜಿ ಸದಸ್ಯ ಕೊರಗಪ್ಪ ನಾಯ್ಕ್, ವಿವಿಧ ಸಮಿತಿ ಸಂಚಾಲಕರು, ಬ್ರಹ್ಮಕಲಶೋತ್ಸವ-ಜೀರ್ಣೋದ್ದಾರ, ಆಡಳಿತ ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!