22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

ಉಜಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವರ್ಷಿತ್ ಹೆಚ್ ಎಂ(19) ಫೆ.16 ರಿಂದ ಕಾಣೆಯಾಗಿದ್ದು ಮಗನನ್ನು ಹುಡುಕಿ ಕೊಡುವಂತೆ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವರ್ಷಿತ್ ಹೆಚ್ ಎಂ ಉಜಿರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಉಜಿರೆಯ ಖಾಸಗಿ ಪಿಜಿಯಲ್ಲಿ ಉಳಿದುಕೊಂಡಿದ್ದರು.

ಫೆ.16 ರಂದು ಬೆಳಾಲು ಆರಿಕೋಡಿಯಿಂದ ಉಜಿರೆಗೆ ಬಂದು ಆತನ ಅಜ್ಜ, ಅಜ್ಜಿಯನ್ನು ಉಜಿರೆಯಿಂದ ಚಿಕ್ಕಮಮಗಳೂರಿಗೆ ತೆರಳುವ ಬಸ್ಸಿಗೆ ಹತ್ತಿಸಿ ತಾನು ಪಿಜಿಗೆ ಹೋಗುವುದಾಗಿ ಹೇಳಿದ್ದಾನೆ.

ಬಳಿಕ ತಾಯಿ ದೂರವಾಣಿ ಕರೆಮಾಡಿದ್ದು ವರ್ಷಿತ್ ನ ಮೊಬೈಲ್‌ ಸ್ವೀಚ್ ಆಫ್ ಆಗಿತ್ತು. ಈ ಬಗ್ಗೆ ಪಿಜಿ ಗೆ ಪೋನ್ ಮಾಡಿ ವಿಚಾರಿಸಿದಾಗ ಪಿಜಿಗೆ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ನಂತರ ಸ್ನೇಹಿತರು, ಸಂಬಂಧಿಕರಲ್ಲಿ ವಿಚಾರಿಸಲಾಗಿದ್ದು ಆದರೆ ವರ್ಷಿತ್ ಹೆಚ್ ಎಂ ಎಲ್ಲಿಯೂ ಪತ್ತೆಯಾಗಿಲ್ಲ.

ಕಾಣೆಯಾದ ಮಗನನ್ನು ಪತ್ತೆ ಮಾಡಿಕೊಡಬೇಕಾಗಿ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ ಮನವಿ ಮಾಡಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya
error: Content is protected !!