July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

ಉಜಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವರ್ಷಿತ್ ಹೆಚ್ ಎಂ(19) ಫೆ.16 ರಿಂದ ಕಾಣೆಯಾಗಿದ್ದು ಮಗನನ್ನು ಹುಡುಕಿ ಕೊಡುವಂತೆ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವರ್ಷಿತ್ ಹೆಚ್ ಎಂ ಉಜಿರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಉಜಿರೆಯ ಖಾಸಗಿ ಪಿಜಿಯಲ್ಲಿ ಉಳಿದುಕೊಂಡಿದ್ದರು.

ಫೆ.16 ರಂದು ಬೆಳಾಲು ಆರಿಕೋಡಿಯಿಂದ ಉಜಿರೆಗೆ ಬಂದು ಆತನ ಅಜ್ಜ, ಅಜ್ಜಿಯನ್ನು ಉಜಿರೆಯಿಂದ ಚಿಕ್ಕಮಮಗಳೂರಿಗೆ ತೆರಳುವ ಬಸ್ಸಿಗೆ ಹತ್ತಿಸಿ ತಾನು ಪಿಜಿಗೆ ಹೋಗುವುದಾಗಿ ಹೇಳಿದ್ದಾನೆ.

ಬಳಿಕ ತಾಯಿ ದೂರವಾಣಿ ಕರೆಮಾಡಿದ್ದು ವರ್ಷಿತ್ ನ ಮೊಬೈಲ್‌ ಸ್ವೀಚ್ ಆಫ್ ಆಗಿತ್ತು. ಈ ಬಗ್ಗೆ ಪಿಜಿ ಗೆ ಪೋನ್ ಮಾಡಿ ವಿಚಾರಿಸಿದಾಗ ಪಿಜಿಗೆ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ನಂತರ ಸ್ನೇಹಿತರು, ಸಂಬಂಧಿಕರಲ್ಲಿ ವಿಚಾರಿಸಲಾಗಿದ್ದು ಆದರೆ ವರ್ಷಿತ್ ಹೆಚ್ ಎಂ ಎಲ್ಲಿಯೂ ಪತ್ತೆಯಾಗಿಲ್ಲ.

ಕಾಣೆಯಾದ ಮಗನನ್ನು ಪತ್ತೆ ಮಾಡಿಕೊಡಬೇಕಾಗಿ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ ಮನವಿ ಮಾಡಿದ್ದಾರೆ.

Related posts

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya
error: Content is protected !!