23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

ಉಜಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವರ್ಷಿತ್ ಹೆಚ್ ಎಂ(19) ಫೆ.16 ರಿಂದ ಕಾಣೆಯಾಗಿದ್ದು ಮಗನನ್ನು ಹುಡುಕಿ ಕೊಡುವಂತೆ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವರ್ಷಿತ್ ಹೆಚ್ ಎಂ ಉಜಿರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಉಜಿರೆಯ ಖಾಸಗಿ ಪಿಜಿಯಲ್ಲಿ ಉಳಿದುಕೊಂಡಿದ್ದರು.

ಫೆ.16 ರಂದು ಬೆಳಾಲು ಆರಿಕೋಡಿಯಿಂದ ಉಜಿರೆಗೆ ಬಂದು ಆತನ ಅಜ್ಜ, ಅಜ್ಜಿಯನ್ನು ಉಜಿರೆಯಿಂದ ಚಿಕ್ಕಮಮಗಳೂರಿಗೆ ತೆರಳುವ ಬಸ್ಸಿಗೆ ಹತ್ತಿಸಿ ತಾನು ಪಿಜಿಗೆ ಹೋಗುವುದಾಗಿ ಹೇಳಿದ್ದಾನೆ.

ಬಳಿಕ ತಾಯಿ ದೂರವಾಣಿ ಕರೆಮಾಡಿದ್ದು ವರ್ಷಿತ್ ನ ಮೊಬೈಲ್‌ ಸ್ವೀಚ್ ಆಫ್ ಆಗಿತ್ತು. ಈ ಬಗ್ಗೆ ಪಿಜಿ ಗೆ ಪೋನ್ ಮಾಡಿ ವಿಚಾರಿಸಿದಾಗ ಪಿಜಿಗೆ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ನಂತರ ಸ್ನೇಹಿತರು, ಸಂಬಂಧಿಕರಲ್ಲಿ ವಿಚಾರಿಸಲಾಗಿದ್ದು ಆದರೆ ವರ್ಷಿತ್ ಹೆಚ್ ಎಂ ಎಲ್ಲಿಯೂ ಪತ್ತೆಯಾಗಿಲ್ಲ.

ಕಾಣೆಯಾದ ಮಗನನ್ನು ಪತ್ತೆ ಮಾಡಿಕೊಡಬೇಕಾಗಿ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ ಮನವಿ ಮಾಡಿದ್ದಾರೆ.

Related posts

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!