ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

ಉಜಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವರ್ಷಿತ್ ಹೆಚ್ ಎಂ(19) ಫೆ.16 ರಿಂದ ಕಾಣೆಯಾಗಿದ್ದು ಮಗನನ್ನು ಹುಡುಕಿ ಕೊಡುವಂತೆ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವರ್ಷಿತ್ ಹೆಚ್ ಎಂ ಉಜಿರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಉಜಿರೆಯ ಖಾಸಗಿ ಪಿಜಿಯಲ್ಲಿ ಉಳಿದುಕೊಂಡಿದ್ದರು.

ಫೆ.16 ರಂದು ಬೆಳಾಲು ಆರಿಕೋಡಿಯಿಂದ ಉಜಿರೆಗೆ ಬಂದು ಆತನ ಅಜ್ಜ, ಅಜ್ಜಿಯನ್ನು ಉಜಿರೆಯಿಂದ ಚಿಕ್ಕಮಮಗಳೂರಿಗೆ ತೆರಳುವ ಬಸ್ಸಿಗೆ ಹತ್ತಿಸಿ ತಾನು ಪಿಜಿಗೆ ಹೋಗುವುದಾಗಿ ಹೇಳಿದ್ದಾನೆ.

ಬಳಿಕ ತಾಯಿ ದೂರವಾಣಿ ಕರೆಮಾಡಿದ್ದು ವರ್ಷಿತ್ ನ ಮೊಬೈಲ್‌ ಸ್ವೀಚ್ ಆಫ್ ಆಗಿತ್ತು. ಈ ಬಗ್ಗೆ ಪಿಜಿ ಗೆ ಪೋನ್ ಮಾಡಿ ವಿಚಾರಿಸಿದಾಗ ಪಿಜಿಗೆ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ನಂತರ ಸ್ನೇಹಿತರು, ಸಂಬಂಧಿಕರಲ್ಲಿ ವಿಚಾರಿಸಲಾಗಿದ್ದು ಆದರೆ ವರ್ಷಿತ್ ಹೆಚ್ ಎಂ ಎಲ್ಲಿಯೂ ಪತ್ತೆಯಾಗಿಲ್ಲ.

ಕಾಣೆಯಾದ ಮಗನನ್ನು ಪತ್ತೆ ಮಾಡಿಕೊಡಬೇಕಾಗಿ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ ಮನವಿ ಮಾಡಿದ್ದಾರೆ.

Related posts

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಎಫ್.ಡಿ.ಪಿ ಕಾರ್ಯಾಗಾರದ ಮಾಹಿತಿ ಕೈಪಿಡಿ ಬಿಡುಗಡೆ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya
error: Content is protected !!