37.9 C
ಪುತ್ತೂರು, ಬೆಳ್ತಂಗಡಿ
March 6, 2026
ರಾಜ್ಯ ಸುದ್ದಿ

ಜೈನ ಧರ್ಮದ ಯುಗ ಪ್ರವರ್ತಕ : ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಜಿನೈಕ್ಯ

ಬೆಳ್ತಂಗಡಿ: ಜೈನ ಧರ್ಮದ ಯುಗ ಪ್ರವರ್ತಕ , ಚರ್ಯಾ ಶಿರೋಮಣಿ , ಆಗಮ‌ಪ್ರಣೇತ , ನಿಜವಾದ ದೇವ, ಗುರು , ಶಾಸ್ತ್ರಗಳ ಆರಾಧಕ , ಸಮಿಚೀನ ಧರ್ಮದ ಪ್ರವರ್ತಕ ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಇಂದು ಸಮಾಧಿಯಾಗಿರುತ್ತಾರೆ.

ಮಹಾಮಹಿಮ ಪೂಜ್ಯರು ಜೈನ ಸಮಾಜಕ್ಕೆ ಅದರಲ್ಲೂ ದಿಗಂಬರ ಅಮ್ನಾಯದ ಭವ್ಯ ಪರಂಪರೆಯ ದ್ಯೋತಕವಾಗಿ ಚರ್ಯೆಯನ್ನು ಆಚರಿಸುತ್ತಾ ಭಗವಾನ್ ಮಹಾವೀರರ ಶಾಸನಕ್ಕೆ ಭಕ್ತಿಯನ್ನು ಪೇರಿಸಿ ಸಕಲರಿಗೂ

ಪೂಜ್ಯರಾಗಿದ್ದರು. ಅನೇಕಾನೇಕ ಭವ್ಯ ಜಿನಮಂದಿರಗಳ ಪ್ರವರ್ಧಮಾನಕ್ಕೆ ನಿಮಿತ್ತರಾಗಿದ್ದ ಆಚಾರ್ಯಶ್ರೀಯವರು ಭವ್ಯ ಶಿಷ್ಯ ಪರಂಪರೆಯನ್ನು ದೇಶದಾದ್ಯಂತ ಪಸರಿಸಿ ಜೈನ ಧರ್ಮಕ್ಕೆ ಶಿರೋಮಣಿಯಾಗಿದ್ದರು.

ಆಚಾರ್ಯಶ್ರೀಯವರ ಜನ್ಮವು ಕರ್ನಾಟಕದ ಬೆಳಗಾವಿಯಲ್ಲಿ ಆಗಿತ್ತು. ಇದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಆಚಾರ್ಯಶ್ರೀಯವರ ಭವ್ಯ ಚೇತನದ ಅಗಲುವಿಕೆಯಿಂದ ಜೈನ ಧರ್ಮಕ್ಕೆ ಅಪಾರ ನಷ್ಟವಾಗಿದೆ. ಆಚಾರ್ಯಶ್ರೀಯವರ ಉನ್ನತ ತತ್ವ ಆದರ್ಶಗಳು ಜಗತ್ತಿನ ಎಲ್ಲಡೆ ಪಸರಿಸಲಿ ಹಾಗೂ ಜೈನ ಧರ್ಮಕ್ಕೆ ನಿತ್ಯ ಪ್ರಭೆಯು ಅನುರಣಿಸುತ್ತಿರಲಿ ಎಂದು ಆಚಾರ್ಯಶ್ರೀಯವರ ಭವ್ಯಾತ್ಮಕ್ಕೆ ಭಕ್ತಿಪೂರ್ವಕ ನಮನಗಳನ್ನು ವಿನಯಾಂಜಲಿಯನ್ನು ಅರ್ಪಿಸುತ್ತೇನೆ

ನಿರಂಜನ್ ಜೈನ್ ಕುದ್ಯಾಡಿ

Related posts

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya
error: Content is protected !!