April 2, 2025
ರಾಜ್ಯ ಸುದ್ದಿ

ಜೈನ ಧರ್ಮದ ಯುಗ ಪ್ರವರ್ತಕ : ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಜಿನೈಕ್ಯ

ಬೆಳ್ತಂಗಡಿ: ಜೈನ ಧರ್ಮದ ಯುಗ ಪ್ರವರ್ತಕ , ಚರ್ಯಾ ಶಿರೋಮಣಿ , ಆಗಮ‌ಪ್ರಣೇತ , ನಿಜವಾದ ದೇವ, ಗುರು , ಶಾಸ್ತ್ರಗಳ ಆರಾಧಕ , ಸಮಿಚೀನ ಧರ್ಮದ ಪ್ರವರ್ತಕ ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಇಂದು ಸಮಾಧಿಯಾಗಿರುತ್ತಾರೆ.

ಮಹಾಮಹಿಮ ಪೂಜ್ಯರು ಜೈನ ಸಮಾಜಕ್ಕೆ ಅದರಲ್ಲೂ ದಿಗಂಬರ ಅಮ್ನಾಯದ ಭವ್ಯ ಪರಂಪರೆಯ ದ್ಯೋತಕವಾಗಿ ಚರ್ಯೆಯನ್ನು ಆಚರಿಸುತ್ತಾ ಭಗವಾನ್ ಮಹಾವೀರರ ಶಾಸನಕ್ಕೆ ಭಕ್ತಿಯನ್ನು ಪೇರಿಸಿ ಸಕಲರಿಗೂ

ಪೂಜ್ಯರಾಗಿದ್ದರು. ಅನೇಕಾನೇಕ ಭವ್ಯ ಜಿನಮಂದಿರಗಳ ಪ್ರವರ್ಧಮಾನಕ್ಕೆ ನಿಮಿತ್ತರಾಗಿದ್ದ ಆಚಾರ್ಯಶ್ರೀಯವರು ಭವ್ಯ ಶಿಷ್ಯ ಪರಂಪರೆಯನ್ನು ದೇಶದಾದ್ಯಂತ ಪಸರಿಸಿ ಜೈನ ಧರ್ಮಕ್ಕೆ ಶಿರೋಮಣಿಯಾಗಿದ್ದರು.

ಆಚಾರ್ಯಶ್ರೀಯವರ ಜನ್ಮವು ಕರ್ನಾಟಕದ ಬೆಳಗಾವಿಯಲ್ಲಿ ಆಗಿತ್ತು. ಇದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಆಚಾರ್ಯಶ್ರೀಯವರ ಭವ್ಯ ಚೇತನದ ಅಗಲುವಿಕೆಯಿಂದ ಜೈನ ಧರ್ಮಕ್ಕೆ ಅಪಾರ ನಷ್ಟವಾಗಿದೆ. ಆಚಾರ್ಯಶ್ರೀಯವರ ಉನ್ನತ ತತ್ವ ಆದರ್ಶಗಳು ಜಗತ್ತಿನ ಎಲ್ಲಡೆ ಪಸರಿಸಲಿ ಹಾಗೂ ಜೈನ ಧರ್ಮಕ್ಕೆ ನಿತ್ಯ ಪ್ರಭೆಯು ಅನುರಣಿಸುತ್ತಿರಲಿ ಎಂದು ಆಚಾರ್ಯಶ್ರೀಯವರ ಭವ್ಯಾತ್ಮಕ್ಕೆ ಭಕ್ತಿಪೂರ್ವಕ ನಮನಗಳನ್ನು ವಿನಯಾಂಜಲಿಯನ್ನು ಅರ್ಪಿಸುತ್ತೇನೆ

ನಿರಂಜನ್ ಜೈನ್ ಕುದ್ಯಾಡಿ

Related posts

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya
error: Content is protected !!