25.5 C
ಪುತ್ತೂರು, ಬೆಳ್ತಂಗಡಿ
June 8, 2026
ರಾಜ್ಯ ಸುದ್ದಿ

ಜೈನ ಧರ್ಮದ ಯುಗ ಪ್ರವರ್ತಕ : ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಜಿನೈಕ್ಯ

ಬೆಳ್ತಂಗಡಿ: ಜೈನ ಧರ್ಮದ ಯುಗ ಪ್ರವರ್ತಕ , ಚರ್ಯಾ ಶಿರೋಮಣಿ , ಆಗಮ‌ಪ್ರಣೇತ , ನಿಜವಾದ ದೇವ, ಗುರು , ಶಾಸ್ತ್ರಗಳ ಆರಾಧಕ , ಸಮಿಚೀನ ಧರ್ಮದ ಪ್ರವರ್ತಕ ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಇಂದು ಸಮಾಧಿಯಾಗಿರುತ್ತಾರೆ.

ಮಹಾಮಹಿಮ ಪೂಜ್ಯರು ಜೈನ ಸಮಾಜಕ್ಕೆ ಅದರಲ್ಲೂ ದಿಗಂಬರ ಅಮ್ನಾಯದ ಭವ್ಯ ಪರಂಪರೆಯ ದ್ಯೋತಕವಾಗಿ ಚರ್ಯೆಯನ್ನು ಆಚರಿಸುತ್ತಾ ಭಗವಾನ್ ಮಹಾವೀರರ ಶಾಸನಕ್ಕೆ ಭಕ್ತಿಯನ್ನು ಪೇರಿಸಿ ಸಕಲರಿಗೂ

ಪೂಜ್ಯರಾಗಿದ್ದರು. ಅನೇಕಾನೇಕ ಭವ್ಯ ಜಿನಮಂದಿರಗಳ ಪ್ರವರ್ಧಮಾನಕ್ಕೆ ನಿಮಿತ್ತರಾಗಿದ್ದ ಆಚಾರ್ಯಶ್ರೀಯವರು ಭವ್ಯ ಶಿಷ್ಯ ಪರಂಪರೆಯನ್ನು ದೇಶದಾದ್ಯಂತ ಪಸರಿಸಿ ಜೈನ ಧರ್ಮಕ್ಕೆ ಶಿರೋಮಣಿಯಾಗಿದ್ದರು.

ಆಚಾರ್ಯಶ್ರೀಯವರ ಜನ್ಮವು ಕರ್ನಾಟಕದ ಬೆಳಗಾವಿಯಲ್ಲಿ ಆಗಿತ್ತು. ಇದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಆಚಾರ್ಯಶ್ರೀಯವರ ಭವ್ಯ ಚೇತನದ ಅಗಲುವಿಕೆಯಿಂದ ಜೈನ ಧರ್ಮಕ್ಕೆ ಅಪಾರ ನಷ್ಟವಾಗಿದೆ. ಆಚಾರ್ಯಶ್ರೀಯವರ ಉನ್ನತ ತತ್ವ ಆದರ್ಶಗಳು ಜಗತ್ತಿನ ಎಲ್ಲಡೆ ಪಸರಿಸಲಿ ಹಾಗೂ ಜೈನ ಧರ್ಮಕ್ಕೆ ನಿತ್ಯ ಪ್ರಭೆಯು ಅನುರಣಿಸುತ್ತಿರಲಿ ಎಂದು ಆಚಾರ್ಯಶ್ರೀಯವರ ಭವ್ಯಾತ್ಮಕ್ಕೆ ಭಕ್ತಿಪೂರ್ವಕ ನಮನಗಳನ್ನು ವಿನಯಾಂಜಲಿಯನ್ನು ಅರ್ಪಿಸುತ್ತೇನೆ

ನಿರಂಜನ್ ಜೈನ್ ಕುದ್ಯಾಡಿ

Related posts

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಆರೋಪದಲ್ಲಿ ಸಿಎಂ ರಾಜಿನಾಮೆ ಅಗ್ರಹಿಸಿ ಮೈಸೂರು ಚಲೋ ಪಾದಯಾತ್ರೆ: ನಿರ್ವಹಣೆಯ ಹೊಣೆ ಹೊತ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya
error: Content is protected !!