September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿತು.

ಫೆ.18ರಂದು ಅರಸಿನಮಕ್ಕಿಯ ಕೇಂದ್ರ ಮೈದಾನದಿಂದ ಭಕ್ತರು ಶ್ರೀ ಕ್ಷೇತ್ರಕ್ಕೆ ನೀಡಿರುವ ಪೂಜಾ ಪರಿಕರಗಳು, ಶ್ರೀ ದೇವರ ವಿಗ್ರಹ, ಹತ್ಯಡ್ಕ ಗ್ರಾಮಸ್ಥರಿಂದ ಹೊರೆಕಾಣಿಕೆ, ಬ್ರಹ್ಮಕಲಶೋತ್ಸವ ಅನ್ನದಾನಕ್ಕೆ ಭಕ್ತರು ನೀಡಿದ ಅಕ್ಕಿ ಸಮರ್ಪಣೆಯ ವೈಭವದ ಆಕರ್ಷಕ ಮೆರವಣಿಗೆಯು ಶ್ರೀ ಕ್ಷೇತ್ರಕ್ಕೆ ನಡೆಯಿತು.

ಹೊರಕಾಣಿಕೆ ಮೆರವಣಿಗೆಯನ್ನು ಕೊಕ್ಕಡದ ಹಿರಿಯ ವೈದ್ಯರಾದ ಡಾ. ಮೋಹನದಾಸ್ ಗೌಡ ಉದ್ಘಾಟಿಸಿದರು. ಮೆರವಣಿಗೆಯಲ್ಲಿ ಹುಲಿ ಕುಣಿತ, ಭಜನೆ ತಂಡಗಳು ಭಾಗವಹಿಸಿದ್ದವು. ಶ್ರೀ ಕ್ಷೇತ್ರದಲ್ಲಿ ಹೊರೆಕಾಣಿಕೆ, ಪೂಜಾ ಪರಿಕರಗಳಿಗೆ ಪೂಜೆ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ,ಸಂಚಾಲಕ ಬಿ. ಜಯರಾಮ್ ನೆಲ್ಲಿತ್ತಾಯ ಕಾರ್ಯದರ್ಶಿ ಮುರಳೀಧರ ಶೆಟ್ಟಿಗಾರ್, ಅರ್ಚಕ ಉಲ್ಲಾಸ್ ಭಟ್ ಅಂತರ,ಹೊರೆಕಾಣಿಕೆ ಸಮಿತಿ ಸಂಚಾಲಕ ರಾಘವ ಗೌಡ ಮೀಯಾಳ, ಧರ್ಮಸ್ಥಳ ಜಿ. ಪಂ. ಮಾಜಿ ಸದಸ್ಯ ಕೊರಗಪ್ಪ ನಾಯ್ಕ್, ವಿವಿಧ ಸಮಿತಿ ಸಂಚಾಲಕರು, ಬ್ರಹ್ಮಕಲಶೋತ್ಸವ-ಜೀರ್ಣೋದ್ದಾರ, ಆಡಳಿತ ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.

Related posts

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಕಾರ್ಗಿಲ್ ವಿಜಯ ದಿನ: ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಾರ್ಗಿಲ್ ವನಕ್ಕೆ ಭೇಟಿ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!