ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

ಉಜಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವರ್ಷಿತ್ ಹೆಚ್ ಎಂ(19) ಫೆ.16 ರಿಂದ ಕಾಣೆಯಾಗಿದ್ದು ಮಗನನ್ನು ಹುಡುಕಿ ಕೊಡುವಂತೆ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವರ್ಷಿತ್ ಹೆಚ್ ಎಂ ಉಜಿರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಉಜಿರೆಯ ಖಾಸಗಿ ಪಿಜಿಯಲ್ಲಿ ಉಳಿದುಕೊಂಡಿದ್ದರು.

ಫೆ.16 ರಂದು ಬೆಳಾಲು ಆರಿಕೋಡಿಯಿಂದ ಉಜಿರೆಗೆ ಬಂದು ಆತನ ಅಜ್ಜ, ಅಜ್ಜಿಯನ್ನು ಉಜಿರೆಯಿಂದ ಚಿಕ್ಕಮಮಗಳೂರಿಗೆ ತೆರಳುವ ಬಸ್ಸಿಗೆ ಹತ್ತಿಸಿ ತಾನು ಪಿಜಿಗೆ ಹೋಗುವುದಾಗಿ ಹೇಳಿದ್ದಾನೆ.

ಬಳಿಕ ತಾಯಿ ದೂರವಾಣಿ ಕರೆಮಾಡಿದ್ದು ವರ್ಷಿತ್ ನ ಮೊಬೈಲ್‌ ಸ್ವೀಚ್ ಆಫ್ ಆಗಿತ್ತು. ಈ ಬಗ್ಗೆ ಪಿಜಿ ಗೆ ಪೋನ್ ಮಾಡಿ ವಿಚಾರಿಸಿದಾಗ ಪಿಜಿಗೆ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ನಂತರ ಸ್ನೇಹಿತರು, ಸಂಬಂಧಿಕರಲ್ಲಿ ವಿಚಾರಿಸಲಾಗಿದ್ದು ಆದರೆ ವರ್ಷಿತ್ ಹೆಚ್ ಎಂ ಎಲ್ಲಿಯೂ ಪತ್ತೆಯಾಗಿಲ್ಲ.

ಕಾಣೆಯಾದ ಮಗನನ್ನು ಪತ್ತೆ ಮಾಡಿಕೊಡಬೇಕಾಗಿ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ ಮನವಿ ಮಾಡಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ-ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya
error: Content is protected !!