26.7 C
ಪುತ್ತೂರು, ಬೆಳ್ತಂಗಡಿ
June 8, 2026
ರಾಜ್ಯ ಸುದ್ದಿ

ಜೈನ ಧರ್ಮದ ಯುಗ ಪ್ರವರ್ತಕ : ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಜಿನೈಕ್ಯ

ಬೆಳ್ತಂಗಡಿ: ಜೈನ ಧರ್ಮದ ಯುಗ ಪ್ರವರ್ತಕ , ಚರ್ಯಾ ಶಿರೋಮಣಿ , ಆಗಮ‌ಪ್ರಣೇತ , ನಿಜವಾದ ದೇವ, ಗುರು , ಶಾಸ್ತ್ರಗಳ ಆರಾಧಕ , ಸಮಿಚೀನ ಧರ್ಮದ ಪ್ರವರ್ತಕ ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಇಂದು ಸಮಾಧಿಯಾಗಿರುತ್ತಾರೆ.

ಮಹಾಮಹಿಮ ಪೂಜ್ಯರು ಜೈನ ಸಮಾಜಕ್ಕೆ ಅದರಲ್ಲೂ ದಿಗಂಬರ ಅಮ್ನಾಯದ ಭವ್ಯ ಪರಂಪರೆಯ ದ್ಯೋತಕವಾಗಿ ಚರ್ಯೆಯನ್ನು ಆಚರಿಸುತ್ತಾ ಭಗವಾನ್ ಮಹಾವೀರರ ಶಾಸನಕ್ಕೆ ಭಕ್ತಿಯನ್ನು ಪೇರಿಸಿ ಸಕಲರಿಗೂ

ಪೂಜ್ಯರಾಗಿದ್ದರು. ಅನೇಕಾನೇಕ ಭವ್ಯ ಜಿನಮಂದಿರಗಳ ಪ್ರವರ್ಧಮಾನಕ್ಕೆ ನಿಮಿತ್ತರಾಗಿದ್ದ ಆಚಾರ್ಯಶ್ರೀಯವರು ಭವ್ಯ ಶಿಷ್ಯ ಪರಂಪರೆಯನ್ನು ದೇಶದಾದ್ಯಂತ ಪಸರಿಸಿ ಜೈನ ಧರ್ಮಕ್ಕೆ ಶಿರೋಮಣಿಯಾಗಿದ್ದರು.

ಆಚಾರ್ಯಶ್ರೀಯವರ ಜನ್ಮವು ಕರ್ನಾಟಕದ ಬೆಳಗಾವಿಯಲ್ಲಿ ಆಗಿತ್ತು. ಇದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಆಚಾರ್ಯಶ್ರೀಯವರ ಭವ್ಯ ಚೇತನದ ಅಗಲುವಿಕೆಯಿಂದ ಜೈನ ಧರ್ಮಕ್ಕೆ ಅಪಾರ ನಷ್ಟವಾಗಿದೆ. ಆಚಾರ್ಯಶ್ರೀಯವರ ಉನ್ನತ ತತ್ವ ಆದರ್ಶಗಳು ಜಗತ್ತಿನ ಎಲ್ಲಡೆ ಪಸರಿಸಲಿ ಹಾಗೂ ಜೈನ ಧರ್ಮಕ್ಕೆ ನಿತ್ಯ ಪ್ರಭೆಯು ಅನುರಣಿಸುತ್ತಿರಲಿ ಎಂದು ಆಚಾರ್ಯಶ್ರೀಯವರ ಭವ್ಯಾತ್ಮಕ್ಕೆ ಭಕ್ತಿಪೂರ್ವಕ ನಮನಗಳನ್ನು ವಿನಯಾಂಜಲಿಯನ್ನು ಅರ್ಪಿಸುತ್ತೇನೆ

ನಿರಂಜನ್ ಜೈನ್ ಕುದ್ಯಾಡಿ

Related posts

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya
error: Content is protected !!