September 6, 2026
ರಾಜ್ಯ ಸುದ್ದಿ

ಜೈನ ಧರ್ಮದ ಯುಗ ಪ್ರವರ್ತಕ : ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಜಿನೈಕ್ಯ

ಬೆಳ್ತಂಗಡಿ: ಜೈನ ಧರ್ಮದ ಯುಗ ಪ್ರವರ್ತಕ , ಚರ್ಯಾ ಶಿರೋಮಣಿ , ಆಗಮ‌ಪ್ರಣೇತ , ನಿಜವಾದ ದೇವ, ಗುರು , ಶಾಸ್ತ್ರಗಳ ಆರಾಧಕ , ಸಮಿಚೀನ ಧರ್ಮದ ಪ್ರವರ್ತಕ ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಇಂದು ಸಮಾಧಿಯಾಗಿರುತ್ತಾರೆ.

ಮಹಾಮಹಿಮ ಪೂಜ್ಯರು ಜೈನ ಸಮಾಜಕ್ಕೆ ಅದರಲ್ಲೂ ದಿಗಂಬರ ಅಮ್ನಾಯದ ಭವ್ಯ ಪರಂಪರೆಯ ದ್ಯೋತಕವಾಗಿ ಚರ್ಯೆಯನ್ನು ಆಚರಿಸುತ್ತಾ ಭಗವಾನ್ ಮಹಾವೀರರ ಶಾಸನಕ್ಕೆ ಭಕ್ತಿಯನ್ನು ಪೇರಿಸಿ ಸಕಲರಿಗೂ

ಪೂಜ್ಯರಾಗಿದ್ದರು. ಅನೇಕಾನೇಕ ಭವ್ಯ ಜಿನಮಂದಿರಗಳ ಪ್ರವರ್ಧಮಾನಕ್ಕೆ ನಿಮಿತ್ತರಾಗಿದ್ದ ಆಚಾರ್ಯಶ್ರೀಯವರು ಭವ್ಯ ಶಿಷ್ಯ ಪರಂಪರೆಯನ್ನು ದೇಶದಾದ್ಯಂತ ಪಸರಿಸಿ ಜೈನ ಧರ್ಮಕ್ಕೆ ಶಿರೋಮಣಿಯಾಗಿದ್ದರು.

ಆಚಾರ್ಯಶ್ರೀಯವರ ಜನ್ಮವು ಕರ್ನಾಟಕದ ಬೆಳಗಾವಿಯಲ್ಲಿ ಆಗಿತ್ತು. ಇದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಆಚಾರ್ಯಶ್ರೀಯವರ ಭವ್ಯ ಚೇತನದ ಅಗಲುವಿಕೆಯಿಂದ ಜೈನ ಧರ್ಮಕ್ಕೆ ಅಪಾರ ನಷ್ಟವಾಗಿದೆ. ಆಚಾರ್ಯಶ್ರೀಯವರ ಉನ್ನತ ತತ್ವ ಆದರ್ಶಗಳು ಜಗತ್ತಿನ ಎಲ್ಲಡೆ ಪಸರಿಸಲಿ ಹಾಗೂ ಜೈನ ಧರ್ಮಕ್ಕೆ ನಿತ್ಯ ಪ್ರಭೆಯು ಅನುರಣಿಸುತ್ತಿರಲಿ ಎಂದು ಆಚಾರ್ಯಶ್ರೀಯವರ ಭವ್ಯಾತ್ಮಕ್ಕೆ ಭಕ್ತಿಪೂರ್ವಕ ನಮನಗಳನ್ನು ವಿನಯಾಂಜಲಿಯನ್ನು ಅರ್ಪಿಸುತ್ತೇನೆ

ನಿರಂಜನ್ ಜೈನ್ ಕುದ್ಯಾಡಿ

Related posts

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya
error: Content is protected !!