22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

ಬೆಳ್ತಂಗಡಿ ತಾಲೂಕು ಬಳೆಂಜ ಗ್ರಾಮದ ತೆಂಕಕಾರಂದೂರಿನ ಶ್ರೀ ಪ್ರಶಾಂತ ಹಾಗೂ ಶ್ರೀಮತಿ ಲಾವಣ್ಯ ಅವರ ಎರಡನೇ ಪುತ್ರಿ ,ಏಳು ವರ್ಷ ಪ್ರಾಯದ ಕು.ಮಾನ್ಯ ಹುಟ್ಟಿನಿಂದಲೇ ಬುದ್ದಿಮಾಂದ್ಯ ಹಾಗೂ ವಿಕಲಚೇತನೆ. ಎಲ್ಲಾ ಕೆಲಸಗಳಿಗೂ ಇನ್ನೊಬ್ಬರನ್ನೇ ಅವಲಂಬಿತವಾಗಿರ ಬೇಕಾದಂತಹ ಸನ್ನಿವೇಶ.

ಇಂತಹ ಪರಿಸ್ಥಿತಿ ಯಲ್ಲಿ.ಉಜಿರೆ ಗ್ರಾಮ ಅಂಗವಿಕಲರ ಪುನರ್ವಸತಿ ಕಾರ್ಯಕರ್ತರಾದ ವಿಪುಲ್ ಪೂಜಾರಿ ಅವರ ಮನವಿಗೆ ಕೂಡಲೇ ಸ್ಪಂದಿಸಿದ ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘವು , ಆ ವಿಕಲಚೇತನ ಮಗುವಿಗಾಗಿ ರೂ 19000/- ಮೌಲ್ಯ ದ ವಿಶೇಷ ವೀಲ್ ಚೇರ್ ನ್ನು ಇಂದು ಅವರ ಮನೆಗೆ ಹೋಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಧರ ಕೆ.ವಿ, ಪೂರ್ವಾಧ್ಯಕ್ಷರಾದ ನವೀನ್ ಚಂದ್ರ ಕಜೆಕಾರ್, ಕೋಶಾಧಿಕಾರಿ ಗಣಪತಿ ಭಟ್, ಸಂಚಾಲಕರಾದ ಪ್ರಕಾಶ್ ಹಾಗೂ ಉಜಿರೆ ಗ್ರಾಮ ದ ಅಂಗವಿಕಲರ ಪುನರ್ವಸತಿ ಕಾರ್ಯಕರ್ತ ವಿಪುಲ್ ಪೂಜಾರಿ ಹಾಗೂ ಬಳೆಂಜ ಗ್ರಾಮದ ಪುನರ್ವಸತಿ ಕಾರ್ಯಕರ್ತೆ ಕು.ವಿನೋದ ಇವರುಗಳು ಉಪಸ್ಥಿತರಿದ್ದರು

Related posts

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾವೂರು ಸ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್ ಕೆಜಿ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!