24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

ಬೆಳ್ತಂಗಡಿ ತಾಲೂಕು ಬಳೆಂಜ ಗ್ರಾಮದ ತೆಂಕಕಾರಂದೂರಿನ ಶ್ರೀ ಪ್ರಶಾಂತ ಹಾಗೂ ಶ್ರೀಮತಿ ಲಾವಣ್ಯ ಅವರ ಎರಡನೇ ಪುತ್ರಿ ,ಏಳು ವರ್ಷ ಪ್ರಾಯದ ಕು.ಮಾನ್ಯ ಹುಟ್ಟಿನಿಂದಲೇ ಬುದ್ದಿಮಾಂದ್ಯ ಹಾಗೂ ವಿಕಲಚೇತನೆ. ಎಲ್ಲಾ ಕೆಲಸಗಳಿಗೂ ಇನ್ನೊಬ್ಬರನ್ನೇ ಅವಲಂಬಿತವಾಗಿರ ಬೇಕಾದಂತಹ ಸನ್ನಿವೇಶ.

ಇಂತಹ ಪರಿಸ್ಥಿತಿ ಯಲ್ಲಿ.ಉಜಿರೆ ಗ್ರಾಮ ಅಂಗವಿಕಲರ ಪುನರ್ವಸತಿ ಕಾರ್ಯಕರ್ತರಾದ ವಿಪುಲ್ ಪೂಜಾರಿ ಅವರ ಮನವಿಗೆ ಕೂಡಲೇ ಸ್ಪಂದಿಸಿದ ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘವು , ಆ ವಿಕಲಚೇತನ ಮಗುವಿಗಾಗಿ ರೂ 19000/- ಮೌಲ್ಯ ದ ವಿಶೇಷ ವೀಲ್ ಚೇರ್ ನ್ನು ಇಂದು ಅವರ ಮನೆಗೆ ಹೋಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಧರ ಕೆ.ವಿ, ಪೂರ್ವಾಧ್ಯಕ್ಷರಾದ ನವೀನ್ ಚಂದ್ರ ಕಜೆಕಾರ್, ಕೋಶಾಧಿಕಾರಿ ಗಣಪತಿ ಭಟ್, ಸಂಚಾಲಕರಾದ ಪ್ರಕಾಶ್ ಹಾಗೂ ಉಜಿರೆ ಗ್ರಾಮ ದ ಅಂಗವಿಕಲರ ಪುನರ್ವಸತಿ ಕಾರ್ಯಕರ್ತ ವಿಪುಲ್ ಪೂಜಾರಿ ಹಾಗೂ ಬಳೆಂಜ ಗ್ರಾಮದ ಪುನರ್ವಸತಿ ಕಾರ್ಯಕರ್ತೆ ಕು.ವಿನೋದ ಇವರುಗಳು ಉಪಸ್ಥಿತರಿದ್ದರು

Related posts

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya
error: Content is protected !!