25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

ಬೆಳ್ತಂಗಡಿ: ತಾಲೂಕಿನ ಉಜಿರೆ ಎಂಬಲ್ಲಿ ದಿನಾಂಕ 27.09.1995 ರಂದು ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ದಿನಾಂಕ 27.09.1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಎಂಬುವವರ ಮಾಲಿಕತ್ವಕ್ಕೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ಶ್ರೀಧರ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಹೊಂದಿದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು. ತದ ನಂತರ ಆಕೆಯನ್ನು ಮನೆಕೆಲಸದಿಂದ ತೆಗೆದುಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಕೆಲಸದಿಂದ ಕಿತ್ತುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಈ ಸಂಬಂಧ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣ ಕುರಿತು ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ಶಂಕರಗೌಡ ಯಾನೆ ಶ್ರೀಧರ ಗೌಡ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಆರೋಪಿಯ ಪರವಾಗಿ ಜೆ.ಕೆ. ಅಸೋಸಿಯೇಟ್ಸ್ ಬೆಳ್ತಂಗಡಿ. ಇದರ ಖ್ಯಾತ ಹಿರಿಯ ವಕೀಲರಾದ ಜೆ.ಕೆ.ಪೌಲ್ ಹಾಗೂ ಸಹ ವಕೀಲರಾದ ಜಿತೇಶ್ ಕೆ, ಸಿರಾಜುದ್ದೀನ್ ಎ. ಜೋಗಿಬೆಟ್ಟು ವಾದಿಸಿದ್ದರು.

Related posts

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya
error: Content is protected !!