March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

ಬೆಳ್ತಂಗಡಿ: ತಾಲೂಕಿನ ಉಜಿರೆ ಎಂಬಲ್ಲಿ ದಿನಾಂಕ 27.09.1995 ರಂದು ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ದಿನಾಂಕ 27.09.1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಎಂಬುವವರ ಮಾಲಿಕತ್ವಕ್ಕೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ಶ್ರೀಧರ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಹೊಂದಿದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು. ತದ ನಂತರ ಆಕೆಯನ್ನು ಮನೆಕೆಲಸದಿಂದ ತೆಗೆದುಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಕೆಲಸದಿಂದ ಕಿತ್ತುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಈ ಸಂಬಂಧ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣ ಕುರಿತು ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ಶಂಕರಗೌಡ ಯಾನೆ ಶ್ರೀಧರ ಗೌಡ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಆರೋಪಿಯ ಪರವಾಗಿ ಜೆ.ಕೆ. ಅಸೋಸಿಯೇಟ್ಸ್ ಬೆಳ್ತಂಗಡಿ. ಇದರ ಖ್ಯಾತ ಹಿರಿಯ ವಕೀಲರಾದ ಜೆ.ಕೆ.ಪೌಲ್ ಹಾಗೂ ಸಹ ವಕೀಲರಾದ ಜಿತೇಶ್ ಕೆ, ಸಿರಾಜುದ್ದೀನ್ ಎ. ಜೋಗಿಬೆಟ್ಟು ವಾದಿಸಿದ್ದರು.

Related posts

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!