25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

ಬೆಳ್ತಂಗಡಿ: ತಾಲೂಕಿನ ಉಜಿರೆ ಎಂಬಲ್ಲಿ ದಿನಾಂಕ 27.09.1995 ರಂದು ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ದಿನಾಂಕ 27.09.1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಎಂಬುವವರ ಮಾಲಿಕತ್ವಕ್ಕೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ಶ್ರೀಧರ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಹೊಂದಿದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು. ತದ ನಂತರ ಆಕೆಯನ್ನು ಮನೆಕೆಲಸದಿಂದ ತೆಗೆದುಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಕೆಲಸದಿಂದ ಕಿತ್ತುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಈ ಸಂಬಂಧ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣ ಕುರಿತು ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ಶಂಕರಗೌಡ ಯಾನೆ ಶ್ರೀಧರ ಗೌಡ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಆರೋಪಿಯ ಪರವಾಗಿ ಜೆ.ಕೆ. ಅಸೋಸಿಯೇಟ್ಸ್ ಬೆಳ್ತಂಗಡಿ. ಇದರ ಖ್ಯಾತ ಹಿರಿಯ ವಕೀಲರಾದ ಜೆ.ಕೆ.ಪೌಲ್ ಹಾಗೂ ಸಹ ವಕೀಲರಾದ ಜಿತೇಶ್ ಕೆ, ಸಿರಾಜುದ್ದೀನ್ ಎ. ಜೋಗಿಬೆಟ್ಟು ವಾದಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya
error: Content is protected !!