September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

ಬೆಳ್ತಂಗಡಿ: ತಾಲೂಕಿನ ಉಜಿರೆ ಎಂಬಲ್ಲಿ ದಿನಾಂಕ 27.09.1995 ರಂದು ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ದಿನಾಂಕ 27.09.1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಎಂಬುವವರ ಮಾಲಿಕತ್ವಕ್ಕೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ಶ್ರೀಧರ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಹೊಂದಿದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು. ತದ ನಂತರ ಆಕೆಯನ್ನು ಮನೆಕೆಲಸದಿಂದ ತೆಗೆದುಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಕೆಲಸದಿಂದ ಕಿತ್ತುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಈ ಸಂಬಂಧ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣ ಕುರಿತು ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ಶಂಕರಗೌಡ ಯಾನೆ ಶ್ರೀಧರ ಗೌಡ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಆರೋಪಿಯ ಪರವಾಗಿ ಜೆ.ಕೆ. ಅಸೋಸಿಯೇಟ್ಸ್ ಬೆಳ್ತಂಗಡಿ. ಇದರ ಖ್ಯಾತ ಹಿರಿಯ ವಕೀಲರಾದ ಜೆ.ಕೆ.ಪೌಲ್ ಹಾಗೂ ಸಹ ವಕೀಲರಾದ ಜಿತೇಶ್ ಕೆ, ಸಿರಾಜುದ್ದೀನ್ ಎ. ಜೋಗಿಬೆಟ್ಟು ವಾದಿಸಿದ್ದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಉಜಿರೆ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya
error: Content is protected !!