September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ದೇವಸ್ಥಾನದ ವರ್ಷಾವಧಿ ಜಾತ್ರೆ ಫೆ.13 ರಂದು ಫೆ.15 ರ ತನಕ ವಿವಿಧ ಸಾಂಸ್ಕೃತಿಕ ಹಾಗೂ ಕ್ಷೇತ್ರದ ದೈವಗಳಿಗೆ ನೇಮೋತ್ಸವ ಜರಗಿತು.


ಫೆ. 13 ರಂದು ಗೊನೆ ಮೂರ್ತ,ಪಡಿಯಕ್ಕಿ ವಿತರಣೆ, ಶ್ರೀ ಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಹಾಗೂ ಮಹಾ ಪೂಜೆ,ಫೆ‌.14 ರಂದು ಕಲಶ ಮಹಾ ಪೂಜೆ,ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಭಜನೆ,ಮಹಾಪೂಜೆ, ಬಲಿ,ಕವಾಟ ಬಂಧನ,ಫೆ.15 ರಂದು ಕೊಯ್ಯೂರು ಉಣಿಲೆ ಗುತ್ತಿನಿಂದ ದೈವಗಳ ಭಂಡಾರ ಆಗಮನ, ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿ,ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸದಸ್ಯರಿಂದ ಕುಣಿತ ಭಜನೆ, ಕೊಯ್ಯೂರು ನಾದ ನಾಟ್ಯಾಲ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.ರಾತ್ರಿ ಅನ್ನದಾನದ ಸೇವಾರ್ಥಿ ಕೊಯ್ಯೂರು ಕಡಮ್ಮಾಜೆ ಶ್ರೀಮತಿ ಹೇಮಾವತಿ ಮತ್ತು ಉಮೇಶ್ ಗೌಡ ಮನೆಯವರಿಂದ ನಡೆಯಿತು.


ರಾತ್ರಿ ಕ್ಷೇತ್ರದ ದೈವಗಳಿಗೆ ಮತ್ತು ಉಳ್ಳಾಲ್ತಿ ದೈವದ ನೇಮೋತ್ಸವ ಮತ್ತು ಮಹಾ ಪೂಜೆ ಜರುಗಿತು. ಫೆ.16 ರಂದು ಸಂಪ್ರೋಕ್ಷಣೆ ಮಹಾ ಪೂಜೆಯೊಂದಿಗೆ ಸಮಾಪನಗೊಂಡಿದೆ.
ವರ್ಷಾವಧಿ ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷ ಪ್ರಚಂಡಭಾನು ಪಾಂಬೇಲು,ಅಧ್ಯಕ್ಷ ವಸಂತ ಗೌಡ ಕಡಮ್ಮಾಜೆ, ಉಪಾಧ್ಯಕ್ಷ ವಿಜಯ ಗೌಡ ಬರೆ ಮೇಲು, ಆಡಳಿತ ಮೊಕ್ತೇಸರ ಕೆ.ಬಿ.ಹರಿಶ್ಚಂದ್ರ ಬಲ್ಲಾಳ್,ಕೊಯ್ಯೂರು ದೇವಸ್ಥಾನದ ಪ್ರಧಾನ ಅರ್ಚಕ ಆಶೋಕ್ ಕಮಾರ್,ಕಾರ್ಯದರ್ಶಿ ದನಜಂಯ ಆಚಾರ್ಯ ಕೊಡ್ಯೇಲು, ಜತೆ ಕಾರ್ಯದರ್ಶಿ ಪದ್ಮನಾಭ ಗೌಡ ಬೊಳೋಳಿ, ಕೋಶಾಧಿಕಾರಿ ಪೆರ್ನು ಗೌಡ ಬೆಲ್ಡೆ, ಉಪ ಕೋಶಾಧಿಕಾರಿ ಶೇಖರ ಗೌಡ ಬೊಳೊಳಿ,ಭಜನ ಮಂಡಳಿ ಸದಸ್ಯರು, ವಿವಿಧ ಸಂಘದ ಪದಾಧಿಕಾರಿಗಳು ಮತ್ತು ಭಕ್ತರು ಆಗಮಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ

Suddi Udaya
error: Content is protected !!