July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಜೈ ಕರ್ನಾಟಕ ಗಾಯಕರ ಬಳಗ ದಕ್ಷಿಣ ಕನ್ನಡ ಜಿಲ್ಲೆಯ ಸಮಿತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಫೆ.19ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಬಂಗಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯ ಆರಂಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ ಸ್ವಾಗತ ಮಾಡುವ ಮೂಲಕ ಪ್ರಾರಂಭಿಸಿದರು. ಬಳಿಕ ಮಹಿಳಾ ಘಟಕ ಅಧ್ಯಕ್ಷೆ ಕವಿತಾ ದಿನಕರ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಇಸ್ಮಾಯಿಲ್ ಬಂಗಾಡಿ ಬಳಗದ ಬಗ್ಗೆ ಮಾಹಿತಿ ನೀಡಿದರು. ನಂತರ ಸದಸ್ಯತ್ವ ನೋಂದಾವಣೆ ಮಾಡಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ತಾಲೂಕಿನ ಅಧ್ಯಕ್ಷರಾಗಿ ಮೋಹನ್ ಬೆಳ್ತಂಗಡಿ, ಗೌರವ ಅಧ್ಯಕ್ಷರಾಗಿ ಟೋಮಿ ಥೋಮಸ್ ತೋಟತ್ತಾಡಿ, ಮಹಿಳಾ ಘಟಕ ಅಧ್ಯಕ್ಷರಾಗಿ ಗಂಗಾ ಮದು, ಉಪಾಧ್ಯಕ್ಷರಾಗಿ ಜಯಶ್ರೀ ಮತ್ತು ಸುಮಂಗಳ, ಪ್ರದಾನ ಕಾರ್ಯದರ್ಶಿಯಾಗಿ ಗಣೇಶ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿಯಾಗಿ ಕುಸುಮ ಬೈಪಾಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಜಗನ್ನಾಥ್ ಮುಂಡಾಜೆ ಮತ್ತು ಪ್ರಸಾದ್ ಶೆಟ್ಟಿ ಮಾದ್ಯಮ ಸಲಹೆಗಾರರಾಗಿ ರಂಜನ್ ಗೌಡ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ, ಜಿಲ್ಲಾ ಕೋಶಾಧಿಕಾರಿ ನವೀನ್ ಕುಮಾರ್ ಬಂಗಾಡಿ ಜಿಲ್ಲಾ ಮಾದ್ಯಮ ಸಲಹೆಗಾರ ಶಾಹೀನ್ ಆತ್ತಾಜೆ ಮತ್ತು ತಾಲೂಕು ಗಾಯಕರು ಉಪಸ್ಥಿತರಿದ್ದರು. ಶಾಹೀನ್ ಅತ್ತಾಜೆಯವರ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನೆ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya
error: Content is protected !!