September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಜೈ ಕರ್ನಾಟಕ ಗಾಯಕರ ಬಳಗ ದಕ್ಷಿಣ ಕನ್ನಡ ಜಿಲ್ಲೆಯ ಸಮಿತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಫೆ.19ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಬಂಗಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯ ಆರಂಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ ಸ್ವಾಗತ ಮಾಡುವ ಮೂಲಕ ಪ್ರಾರಂಭಿಸಿದರು. ಬಳಿಕ ಮಹಿಳಾ ಘಟಕ ಅಧ್ಯಕ್ಷೆ ಕವಿತಾ ದಿನಕರ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಇಸ್ಮಾಯಿಲ್ ಬಂಗಾಡಿ ಬಳಗದ ಬಗ್ಗೆ ಮಾಹಿತಿ ನೀಡಿದರು. ನಂತರ ಸದಸ್ಯತ್ವ ನೋಂದಾವಣೆ ಮಾಡಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ತಾಲೂಕಿನ ಅಧ್ಯಕ್ಷರಾಗಿ ಮೋಹನ್ ಬೆಳ್ತಂಗಡಿ, ಗೌರವ ಅಧ್ಯಕ್ಷರಾಗಿ ಟೋಮಿ ಥೋಮಸ್ ತೋಟತ್ತಾಡಿ, ಮಹಿಳಾ ಘಟಕ ಅಧ್ಯಕ್ಷರಾಗಿ ಗಂಗಾ ಮದು, ಉಪಾಧ್ಯಕ್ಷರಾಗಿ ಜಯಶ್ರೀ ಮತ್ತು ಸುಮಂಗಳ, ಪ್ರದಾನ ಕಾರ್ಯದರ್ಶಿಯಾಗಿ ಗಣೇಶ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿಯಾಗಿ ಕುಸುಮ ಬೈಪಾಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಜಗನ್ನಾಥ್ ಮುಂಡಾಜೆ ಮತ್ತು ಪ್ರಸಾದ್ ಶೆಟ್ಟಿ ಮಾದ್ಯಮ ಸಲಹೆಗಾರರಾಗಿ ರಂಜನ್ ಗೌಡ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ, ಜಿಲ್ಲಾ ಕೋಶಾಧಿಕಾರಿ ನವೀನ್ ಕುಮಾರ್ ಬಂಗಾಡಿ ಜಿಲ್ಲಾ ಮಾದ್ಯಮ ಸಲಹೆಗಾರ ಶಾಹೀನ್ ಆತ್ತಾಜೆ ಮತ್ತು ತಾಲೂಕು ಗಾಯಕರು ಉಪಸ್ಥಿತರಿದ್ದರು. ಶಾಹೀನ್ ಅತ್ತಾಜೆಯವರ ಧನ್ಯವಾದವಿತ್ತರು.

Related posts

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಮಾವಿನಕಟ್ಟೆ ಮೋನಪ್ಪ ಶೆಟ್ಟಿ ನಿಧನ

Suddi Udaya
error: Content is protected !!