23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಜೈ ಕರ್ನಾಟಕ ಗಾಯಕರ ಬಳಗ ದಕ್ಷಿಣ ಕನ್ನಡ ಜಿಲ್ಲೆಯ ಸಮಿತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಫೆ.19ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಬಂಗಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯ ಆರಂಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ ಸ್ವಾಗತ ಮಾಡುವ ಮೂಲಕ ಪ್ರಾರಂಭಿಸಿದರು. ಬಳಿಕ ಮಹಿಳಾ ಘಟಕ ಅಧ್ಯಕ್ಷೆ ಕವಿತಾ ದಿನಕರ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಇಸ್ಮಾಯಿಲ್ ಬಂಗಾಡಿ ಬಳಗದ ಬಗ್ಗೆ ಮಾಹಿತಿ ನೀಡಿದರು. ನಂತರ ಸದಸ್ಯತ್ವ ನೋಂದಾವಣೆ ಮಾಡಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ತಾಲೂಕಿನ ಅಧ್ಯಕ್ಷರಾಗಿ ಮೋಹನ್ ಬೆಳ್ತಂಗಡಿ, ಗೌರವ ಅಧ್ಯಕ್ಷರಾಗಿ ಟೋಮಿ ಥೋಮಸ್ ತೋಟತ್ತಾಡಿ, ಮಹಿಳಾ ಘಟಕ ಅಧ್ಯಕ್ಷರಾಗಿ ಗಂಗಾ ಮದು, ಉಪಾಧ್ಯಕ್ಷರಾಗಿ ಜಯಶ್ರೀ ಮತ್ತು ಸುಮಂಗಳ, ಪ್ರದಾನ ಕಾರ್ಯದರ್ಶಿಯಾಗಿ ಗಣೇಶ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿಯಾಗಿ ಕುಸುಮ ಬೈಪಾಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಜಗನ್ನಾಥ್ ಮುಂಡಾಜೆ ಮತ್ತು ಪ್ರಸಾದ್ ಶೆಟ್ಟಿ ಮಾದ್ಯಮ ಸಲಹೆಗಾರರಾಗಿ ರಂಜನ್ ಗೌಡ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ, ಜಿಲ್ಲಾ ಕೋಶಾಧಿಕಾರಿ ನವೀನ್ ಕುಮಾರ್ ಬಂಗಾಡಿ ಜಿಲ್ಲಾ ಮಾದ್ಯಮ ಸಲಹೆಗಾರ ಶಾಹೀನ್ ಆತ್ತಾಜೆ ಮತ್ತು ತಾಲೂಕು ಗಾಯಕರು ಉಪಸ್ಥಿತರಿದ್ದರು. ಶಾಹೀನ್ ಅತ್ತಾಜೆಯವರ ಧನ್ಯವಾದವಿತ್ತರು.

Related posts

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya
error: Content is protected !!