23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

ಬೆಳ್ತಂಗಡಿ : ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಎಂ ಎಲ್ ಸಿ
ಪ್ರತಾಪ್ ಸಿಂಹ ನಾಯಕ್‌ ಸಚಿವ ಭೈರತಿ ಸುರೇಶ್ ರವರಿಗೆ ಮನವಿ ಮಾಡಿದ್ದಾರೆ.

‘ಸುದ್ದಿ ಉದಯ ಪತ್ರಿಕೆ’ಯಲ್ಲಿ ಈ ಬಗ್ಗೆ ಬಂದ ವರದಿಯನ್ನು ಗಮನಿಸಿ ಈ ಪತ್ರವನ್ನು ಬರೆದಿರುವ ಅವರು,
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ 11 ವಾರ್ಡ್ಗಳಿಗೆ ನೀರು ಪೂರೈಕೆಗಾಗಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ರೂ. 13 ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡು 5 ವರ್ಷಗಳೇ ಕಳೆದಿದ್ದರೂ, ಇದುವೆಗೂ ನಾಗರೀಕರಿಗೆ ಒಂದು ಹನಿ ನೀರು ಕೊಡಲು ಸಾಧ್ಯವಾಗಿಲ್ಲ. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇವರು ಅನುಷ್ಠಾನಗೊಳಿಸಿರುವ ರೂ.13 ಕೋಟಿ ವೆಚ್ಚದ ಕಾಮಗಾರಿ ಇಂದಿಗೂ ಸಂಪೂರ್ಣವಾಗಿ ನಿಷ್ಟ್ರಯೋಜಕವಾಗಿದೆ.

ಸುಮಾರು 13 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಯೋಜನೆ ನಿರ್ಲಕ್ಷ್ಯ ಹಾಗೂ ಅಸಡ್ಡೆಯಿಂದ ಇಂದಿಗೂ ಸಂಪೂರ್ಣ ನಿಷ್ಟ್ರಯೋಜಕವಾಗಿಯೇ ಉಳಿದಿದೆ. ಈ ಬಾರಿ ಮಳೆ ಕಡಿಮೆಯಾಗಿರುವುದರಿಂದ, ನದಿಗಳಲ್ಲಿ ನೀರಿನ ಹರಿವು ಈಗಾಗಲೇ ನಿಂತಿದೆ. ನಗರದಲ್ಲಿ ನೀರಿನ ಸಮಸ್ಯೆ ಈಗಾಗಲೇ ವ್ಯಾಪಕವಾಗಿ ಕಾಡತೊಡಗಿದೆ.

ಆದುದರಿಂದ ನಗರದ ಜನರ ಅನುಕೂಲಕ್ಕಾಗಿ ಮಾಡಿದ ಕೋಟ್ಯಾಂತರ ವೆಚ್ಚದ ಕುಡಿಯುವ ನೀರಿನ ಈ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತಾಗಲು ತತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂದು ನಗರಾಭಿವೃದ್ಧಿ ನಗರ ಯೋಜನೆ ಸಚಿವ ಭೈರತಿ ಸುರೇಶ್ ರವರಿಗೆ ಮನವಿ ಸಲ್ಲಿಸಿ, ಆಗ್ರಹಿಸಿದ್ದಾರೆ.

Related posts

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya
error: Content is protected !!