July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

ಬೆಳ್ತಂಗಡಿ : ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಎಂ ಎಲ್ ಸಿ
ಪ್ರತಾಪ್ ಸಿಂಹ ನಾಯಕ್‌ ಸಚಿವ ಭೈರತಿ ಸುರೇಶ್ ರವರಿಗೆ ಮನವಿ ಮಾಡಿದ್ದಾರೆ.

‘ಸುದ್ದಿ ಉದಯ ಪತ್ರಿಕೆ’ಯಲ್ಲಿ ಈ ಬಗ್ಗೆ ಬಂದ ವರದಿಯನ್ನು ಗಮನಿಸಿ ಈ ಪತ್ರವನ್ನು ಬರೆದಿರುವ ಅವರು,
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ 11 ವಾರ್ಡ್ಗಳಿಗೆ ನೀರು ಪೂರೈಕೆಗಾಗಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ರೂ. 13 ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡು 5 ವರ್ಷಗಳೇ ಕಳೆದಿದ್ದರೂ, ಇದುವೆಗೂ ನಾಗರೀಕರಿಗೆ ಒಂದು ಹನಿ ನೀರು ಕೊಡಲು ಸಾಧ್ಯವಾಗಿಲ್ಲ. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇವರು ಅನುಷ್ಠಾನಗೊಳಿಸಿರುವ ರೂ.13 ಕೋಟಿ ವೆಚ್ಚದ ಕಾಮಗಾರಿ ಇಂದಿಗೂ ಸಂಪೂರ್ಣವಾಗಿ ನಿಷ್ಟ್ರಯೋಜಕವಾಗಿದೆ.

ಸುಮಾರು 13 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಯೋಜನೆ ನಿರ್ಲಕ್ಷ್ಯ ಹಾಗೂ ಅಸಡ್ಡೆಯಿಂದ ಇಂದಿಗೂ ಸಂಪೂರ್ಣ ನಿಷ್ಟ್ರಯೋಜಕವಾಗಿಯೇ ಉಳಿದಿದೆ. ಈ ಬಾರಿ ಮಳೆ ಕಡಿಮೆಯಾಗಿರುವುದರಿಂದ, ನದಿಗಳಲ್ಲಿ ನೀರಿನ ಹರಿವು ಈಗಾಗಲೇ ನಿಂತಿದೆ. ನಗರದಲ್ಲಿ ನೀರಿನ ಸಮಸ್ಯೆ ಈಗಾಗಲೇ ವ್ಯಾಪಕವಾಗಿ ಕಾಡತೊಡಗಿದೆ.

ಆದುದರಿಂದ ನಗರದ ಜನರ ಅನುಕೂಲಕ್ಕಾಗಿ ಮಾಡಿದ ಕೋಟ್ಯಾಂತರ ವೆಚ್ಚದ ಕುಡಿಯುವ ನೀರಿನ ಈ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತಾಗಲು ತತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂದು ನಗರಾಭಿವೃದ್ಧಿ ನಗರ ಯೋಜನೆ ಸಚಿವ ಭೈರತಿ ಸುರೇಶ್ ರವರಿಗೆ ಮನವಿ ಸಲ್ಲಿಸಿ, ಆಗ್ರಹಿಸಿದ್ದಾರೆ.

Related posts

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!