July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

ಮಲವಂತಿಗೆ : ಹಿರಿಯ ಕಂಬಳ ಓಟಗಾರ , ಸಾಧಕ , ಪ್ರಗತಿಪರ ಕೃಷಿಕ ಮಲವಂತಿಗೆ ಗ್ರಾಮದ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ (70 ) ರವರು ನಿಧನರಾದರು.

ದ.ಕ , ಉಡುಪಿ ಜಿಲ್ಲೆಗಳಲ್ಲಿ ಹಲವಾರು ಕಂಬಳಗಳಲ್ಲಿ ಅಡ್ಡ ಹಲಗೆ ವಿಭಾಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಲೋಕಯ್ಯ ಗೌಡ ಅವರು ಹಲವಾರು ಬಾರಿ ಪ್ರಥಮ ಸ್ಥಾನ ಪಡೆದಿದ್ದರು. ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದ ಅವರು ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು. ಕಂಬಳ ಕ್ಷೇತ್ರದ ಗಣನೀಯ ಸೇವೆಯನ್ನು ಗುರುತಿಸಿ ಜಿಲ್ಲೆಯಾದ್ಯಂತ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪಟ್ಟಿದ್ದರು. ಪುರುಷ ಬಳಗವನ್ನು ಸ್ಥಾಪಿಸಿ , ಅದರ ಸ್ಥಾಪಕಧ್ಯಕ್ಷರಾಗಿ , ಇತ್ತೀಚಿನ ತನಕವೂ ತಂಡವನ್ನು ಮುನ್ನಡೆಸಿದ್ದರು. ಗ್ರಾಮದ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ದುಡಿದಿದ್ದ ಅವರು ಅತ್ಯಂತ ಸೌಮ್ಯ ಸ್ವಭಾವದಿಂದ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಲಕ್ಷ್ಮೀ , ಗಂಡು ಮಕ್ಕಳಾದ ನಾರಾಯಣ , ಸುರೇಶ್ , ಮುರಳೀಧರ್, ಹೆಣ್ಣು ಮಗಳಾದ ಸುಜಾತ ಸೇರಿದಂತೆ ಸಾವಿರಾರು ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya
error: Content is protected !!