July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ


ವೇಣೂರು: ವೇಣೂರಿನಲ್ಲಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಫೆ.22 ರಿಂದ ಮಾರ್ಚ್ ಒಂದರ ವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಫೆ.17ರಂದು ವೇಣೂರಿನ ಯಾತ್ರಿನಿವಾಸದಲ್ಲಿ ವಿವಿಧ ಸಮಿತಿಗಳ ಜೊತೆ ಸಮಾಲೋಚನೆ ನಡೆಸಿ ಸಕಾಲಿಕ ಮಾರ್ಗದರ್ಶನ ನೀಡಿದರು.
ಸರ್ವರ ಸಹಕಾರದೊಂದಿಗೆ ಮಹಾಮಸ್ತಕಾಭಿಷೇಕ ಯಶಶ್ವಿಯಾಗಿ  ಧರ್ಮಪ್ರಭಾವನೆಯಾಗಲಿ ಎಂದು ಅವರು ಹಾರೈಸಿದರು.


ಅಭಿಷೇಕ ಸಮಿತಿ, ಪೂಜಾಸಮಿತಿ, ಆಹಾರಸಮಿತಿ, ಮಹಿಳಾಸಮಿತಿ ಮೊದಲಾದ ವಿವಿಧ ಸಮಿತಿಗಳ ಜೊತೆ ಸಮಾಲೋಚನೆ ನಡೆಸಿದ ಪೂಜ್ಯ ಸ್ವಾಮೀಜಿಯವರು ಸೂಕ್ತ ಮಾರ್ಗದರ್ಶನ ನೀಡಿದರು.
ಮಸ್ತಕಾಭಿಷೇಕಕ್ಕೆ ಬೇಕಾದ ಪೂಜ್ಯದ್ರವ್ಯಗಳನ್ನು ಉಚಿತ ಕೊಡುಗೆಯಾಗಿ ನೀಡಿದ ತುಮಕೂರಿನ ಉದ್ಯಮ ರಾಜೇಂದ್ರ ಕುಮಾರ್ ಅವರನ್ನು ಸ್ವಾಮೀಜಿಯವರು ಗೌರವಿಸಿ ಆಶೀರ್ವದಿಸಿದರು.


ಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಅಧ್ಯಕ್ಷತೆ ವಹಿಸಿದರು.
ಸರ್ಕಾರದ ವತಿಯಿಂದ ಮಾರ್ಗದರ್ಶಿಅಧಿಕಾರಿ ಮೂಡಬಿದ್ರೆಯ ಮಾಣಿಕ್ಯ, ಎಂ. ಮಸ್ತಕಾಭಿಷೇಕ ಸಮಿತಿಯ ಪ್ರಧಾನಕಾರ್ಯದರ್ಶಿ ಪ್ರವೀಣಕುಮಾರ್ ಇಂದ್ರ, ಕೋಶಾಧಿಕಾರಿ ಜಯರಾಜ ಕಂಬಳಿ, ವಿಕಾಸ್ ಜೈನ್ ಪೆರಿಂಜೆ ಉಪಸ್ಥಿತರಿದ್ದರು.
ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣದೊಂದಿಗೆ ಪ್ರಾರಂಭವಾದ ಸಭೆಯಲ್ಲಿ ಮಹಾವೀರ ಜೈನ್ ಮೂಡುಕೋಡಿಗುತ್ತು ಕಾರ್ಯಕ್ರಮ ನಿರ್ವಹಿಸಿದರು.

Related posts

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya
error: Content is protected !!