24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

ಬೆಳ್ತಂಗಡಿ: ತಾಲೂಕಿನ ಉಜಿರೆ ಎಂಬಲ್ಲಿ ದಿನಾಂಕ 27.09.1995 ರಂದು ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ದಿನಾಂಕ 27.09.1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಎಂಬುವವರ ಮಾಲಿಕತ್ವಕ್ಕೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ಶ್ರೀಧರ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಹೊಂದಿದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು. ತದ ನಂತರ ಆಕೆಯನ್ನು ಮನೆಕೆಲಸದಿಂದ ತೆಗೆದುಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಕೆಲಸದಿಂದ ಕಿತ್ತುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಈ ಸಂಬಂಧ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣ ಕುರಿತು ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ಶಂಕರಗೌಡ ಯಾನೆ ಶ್ರೀಧರ ಗೌಡ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಆರೋಪಿಯ ಪರವಾಗಿ ಜೆ.ಕೆ. ಅಸೋಸಿಯೇಟ್ಸ್ ಬೆಳ್ತಂಗಡಿ. ಇದರ ಖ್ಯಾತ ಹಿರಿಯ ವಕೀಲರಾದ ಜೆ.ಕೆ.ಪೌಲ್ ಹಾಗೂ ಸಹ ವಕೀಲರಾದ ಜಿತೇಶ್ ಕೆ, ಸಿರಾಜುದ್ದೀನ್ ಎ. ಜೋಗಿಬೆಟ್ಟು ವಾದಿಸಿದ್ದರು.

Related posts

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya
error: Content is protected !!