22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

ಬೆಳ್ತಂಗಡಿ: ತಾಲೂಕಿನ ಉಜಿರೆ ಎಂಬಲ್ಲಿ ದಿನಾಂಕ 27.09.1995 ರಂದು ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ದಿನಾಂಕ 27.09.1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಎಂಬುವವರ ಮಾಲಿಕತ್ವಕ್ಕೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ಶ್ರೀಧರ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಹೊಂದಿದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು. ತದ ನಂತರ ಆಕೆಯನ್ನು ಮನೆಕೆಲಸದಿಂದ ತೆಗೆದುಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಕೆಲಸದಿಂದ ಕಿತ್ತುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಈ ಸಂಬಂಧ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣ ಕುರಿತು ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ಶಂಕರಗೌಡ ಯಾನೆ ಶ್ರೀಧರ ಗೌಡ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಆರೋಪಿಯ ಪರವಾಗಿ ಜೆ.ಕೆ. ಅಸೋಸಿಯೇಟ್ಸ್ ಬೆಳ್ತಂಗಡಿ. ಇದರ ಖ್ಯಾತ ಹಿರಿಯ ವಕೀಲರಾದ ಜೆ.ಕೆ.ಪೌಲ್ ಹಾಗೂ ಸಹ ವಕೀಲರಾದ ಜಿತೇಶ್ ಕೆ, ಸಿರಾಜುದ್ದೀನ್ ಎ. ಜೋಗಿಬೆಟ್ಟು ವಾದಿಸಿದ್ದರು.

Related posts

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!