September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

ಬೆಳ್ತಂಗಡಿ: ತಾಲೂಕಿನ ಉಜಿರೆ ಎಂಬಲ್ಲಿ ದಿನಾಂಕ 27.09.1995 ರಂದು ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ದಿನಾಂಕ 27.09.1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಎಂಬುವವರ ಮಾಲಿಕತ್ವಕ್ಕೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ಶ್ರೀಧರ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಹೊಂದಿದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು. ತದ ನಂತರ ಆಕೆಯನ್ನು ಮನೆಕೆಲಸದಿಂದ ತೆಗೆದುಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಕೆಲಸದಿಂದ ಕಿತ್ತುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಈ ಸಂಬಂಧ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣ ಕುರಿತು ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ಶಂಕರಗೌಡ ಯಾನೆ ಶ್ರೀಧರ ಗೌಡ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಆರೋಪಿಯ ಪರವಾಗಿ ಜೆ.ಕೆ. ಅಸೋಸಿಯೇಟ್ಸ್ ಬೆಳ್ತಂಗಡಿ. ಇದರ ಖ್ಯಾತ ಹಿರಿಯ ವಕೀಲರಾದ ಜೆ.ಕೆ.ಪೌಲ್ ಹಾಗೂ ಸಹ ವಕೀಲರಾದ ಜಿತೇಶ್ ಕೆ, ಸಿರಾಜುದ್ದೀನ್ ಎ. ಜೋಗಿಬೆಟ್ಟು ವಾದಿಸಿದ್ದರು.

Related posts

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

Suddi Udaya
error: Content is protected !!