37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಜೈ ಕರ್ನಾಟಕ ಗಾಯಕರ ಬಳಗ ದಕ್ಷಿಣ ಕನ್ನಡ ಜಿಲ್ಲೆಯ ಸಮಿತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಫೆ.19ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಬಂಗಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯ ಆರಂಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ ಸ್ವಾಗತ ಮಾಡುವ ಮೂಲಕ ಪ್ರಾರಂಭಿಸಿದರು. ಬಳಿಕ ಮಹಿಳಾ ಘಟಕ ಅಧ್ಯಕ್ಷೆ ಕವಿತಾ ದಿನಕರ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಇಸ್ಮಾಯಿಲ್ ಬಂಗಾಡಿ ಬಳಗದ ಬಗ್ಗೆ ಮಾಹಿತಿ ನೀಡಿದರು. ನಂತರ ಸದಸ್ಯತ್ವ ನೋಂದಾವಣೆ ಮಾಡಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ತಾಲೂಕಿನ ಅಧ್ಯಕ್ಷರಾಗಿ ಮೋಹನ್ ಬೆಳ್ತಂಗಡಿ, ಗೌರವ ಅಧ್ಯಕ್ಷರಾಗಿ ಟೋಮಿ ಥೋಮಸ್ ತೋಟತ್ತಾಡಿ, ಮಹಿಳಾ ಘಟಕ ಅಧ್ಯಕ್ಷರಾಗಿ ಗಂಗಾ ಮದು, ಉಪಾಧ್ಯಕ್ಷರಾಗಿ ಜಯಶ್ರೀ ಮತ್ತು ಸುಮಂಗಳ, ಪ್ರದಾನ ಕಾರ್ಯದರ್ಶಿಯಾಗಿ ಗಣೇಶ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿಯಾಗಿ ಕುಸುಮ ಬೈಪಾಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಜಗನ್ನಾಥ್ ಮುಂಡಾಜೆ ಮತ್ತು ಪ್ರಸಾದ್ ಶೆಟ್ಟಿ ಮಾದ್ಯಮ ಸಲಹೆಗಾರರಾಗಿ ರಂಜನ್ ಗೌಡ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ, ಜಿಲ್ಲಾ ಕೋಶಾಧಿಕಾರಿ ನವೀನ್ ಕುಮಾರ್ ಬಂಗಾಡಿ ಜಿಲ್ಲಾ ಮಾದ್ಯಮ ಸಲಹೆಗಾರ ಶಾಹೀನ್ ಆತ್ತಾಜೆ ಮತ್ತು ತಾಲೂಕು ಗಾಯಕರು ಉಪಸ್ಥಿತರಿದ್ದರು. ಶಾಹೀನ್ ಅತ್ತಾಜೆಯವರ ಧನ್ಯವಾದವಿತ್ತರು.

Related posts

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya
error: Content is protected !!