30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

ಬೆಳ್ತಂಗಡಿ : ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಎಂ ಎಲ್ ಸಿ
ಪ್ರತಾಪ್ ಸಿಂಹ ನಾಯಕ್‌ ಸಚಿವ ಭೈರತಿ ಸುರೇಶ್ ರವರಿಗೆ ಮನವಿ ಮಾಡಿದ್ದಾರೆ.

‘ಸುದ್ದಿ ಉದಯ ಪತ್ರಿಕೆ’ಯಲ್ಲಿ ಈ ಬಗ್ಗೆ ಬಂದ ವರದಿಯನ್ನು ಗಮನಿಸಿ ಈ ಪತ್ರವನ್ನು ಬರೆದಿರುವ ಅವರು,
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ 11 ವಾರ್ಡ್ಗಳಿಗೆ ನೀರು ಪೂರೈಕೆಗಾಗಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ರೂ. 13 ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡು 5 ವರ್ಷಗಳೇ ಕಳೆದಿದ್ದರೂ, ಇದುವೆಗೂ ನಾಗರೀಕರಿಗೆ ಒಂದು ಹನಿ ನೀರು ಕೊಡಲು ಸಾಧ್ಯವಾಗಿಲ್ಲ. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇವರು ಅನುಷ್ಠಾನಗೊಳಿಸಿರುವ ರೂ.13 ಕೋಟಿ ವೆಚ್ಚದ ಕಾಮಗಾರಿ ಇಂದಿಗೂ ಸಂಪೂರ್ಣವಾಗಿ ನಿಷ್ಟ್ರಯೋಜಕವಾಗಿದೆ.

ಸುಮಾರು 13 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಯೋಜನೆ ನಿರ್ಲಕ್ಷ್ಯ ಹಾಗೂ ಅಸಡ್ಡೆಯಿಂದ ಇಂದಿಗೂ ಸಂಪೂರ್ಣ ನಿಷ್ಟ್ರಯೋಜಕವಾಗಿಯೇ ಉಳಿದಿದೆ. ಈ ಬಾರಿ ಮಳೆ ಕಡಿಮೆಯಾಗಿರುವುದರಿಂದ, ನದಿಗಳಲ್ಲಿ ನೀರಿನ ಹರಿವು ಈಗಾಗಲೇ ನಿಂತಿದೆ. ನಗರದಲ್ಲಿ ನೀರಿನ ಸಮಸ್ಯೆ ಈಗಾಗಲೇ ವ್ಯಾಪಕವಾಗಿ ಕಾಡತೊಡಗಿದೆ.

ಆದುದರಿಂದ ನಗರದ ಜನರ ಅನುಕೂಲಕ್ಕಾಗಿ ಮಾಡಿದ ಕೋಟ್ಯಾಂತರ ವೆಚ್ಚದ ಕುಡಿಯುವ ನೀರಿನ ಈ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತಾಗಲು ತತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂದು ನಗರಾಭಿವೃದ್ಧಿ ನಗರ ಯೋಜನೆ ಸಚಿವ ಭೈರತಿ ಸುರೇಶ್ ರವರಿಗೆ ಮನವಿ ಸಲ್ಲಿಸಿ, ಆಗ್ರಹಿಸಿದ್ದಾರೆ.

Related posts

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!