22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

ಬೆಳ್ತಂಗಡಿ : ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಎಂ ಎಲ್ ಸಿ
ಪ್ರತಾಪ್ ಸಿಂಹ ನಾಯಕ್‌ ಸಚಿವ ಭೈರತಿ ಸುರೇಶ್ ರವರಿಗೆ ಮನವಿ ಮಾಡಿದ್ದಾರೆ.

‘ಸುದ್ದಿ ಉದಯ ಪತ್ರಿಕೆ’ಯಲ್ಲಿ ಈ ಬಗ್ಗೆ ಬಂದ ವರದಿಯನ್ನು ಗಮನಿಸಿ ಈ ಪತ್ರವನ್ನು ಬರೆದಿರುವ ಅವರು,
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ 11 ವಾರ್ಡ್ಗಳಿಗೆ ನೀರು ಪೂರೈಕೆಗಾಗಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ರೂ. 13 ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡು 5 ವರ್ಷಗಳೇ ಕಳೆದಿದ್ದರೂ, ಇದುವೆಗೂ ನಾಗರೀಕರಿಗೆ ಒಂದು ಹನಿ ನೀರು ಕೊಡಲು ಸಾಧ್ಯವಾಗಿಲ್ಲ. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇವರು ಅನುಷ್ಠಾನಗೊಳಿಸಿರುವ ರೂ.13 ಕೋಟಿ ವೆಚ್ಚದ ಕಾಮಗಾರಿ ಇಂದಿಗೂ ಸಂಪೂರ್ಣವಾಗಿ ನಿಷ್ಟ್ರಯೋಜಕವಾಗಿದೆ.

ಸುಮಾರು 13 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಯೋಜನೆ ನಿರ್ಲಕ್ಷ್ಯ ಹಾಗೂ ಅಸಡ್ಡೆಯಿಂದ ಇಂದಿಗೂ ಸಂಪೂರ್ಣ ನಿಷ್ಟ್ರಯೋಜಕವಾಗಿಯೇ ಉಳಿದಿದೆ. ಈ ಬಾರಿ ಮಳೆ ಕಡಿಮೆಯಾಗಿರುವುದರಿಂದ, ನದಿಗಳಲ್ಲಿ ನೀರಿನ ಹರಿವು ಈಗಾಗಲೇ ನಿಂತಿದೆ. ನಗರದಲ್ಲಿ ನೀರಿನ ಸಮಸ್ಯೆ ಈಗಾಗಲೇ ವ್ಯಾಪಕವಾಗಿ ಕಾಡತೊಡಗಿದೆ.

ಆದುದರಿಂದ ನಗರದ ಜನರ ಅನುಕೂಲಕ್ಕಾಗಿ ಮಾಡಿದ ಕೋಟ್ಯಾಂತರ ವೆಚ್ಚದ ಕುಡಿಯುವ ನೀರಿನ ಈ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತಾಗಲು ತತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂದು ನಗರಾಭಿವೃದ್ಧಿ ನಗರ ಯೋಜನೆ ಸಚಿವ ಭೈರತಿ ಸುರೇಶ್ ರವರಿಗೆ ಮನವಿ ಸಲ್ಲಿಸಿ, ಆಗ್ರಹಿಸಿದ್ದಾರೆ.

Related posts

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya
error: Content is protected !!