25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

ಮಲವಂತಿಗೆ : ಹಿರಿಯ ಕಂಬಳ ಓಟಗಾರ , ಸಾಧಕ , ಪ್ರಗತಿಪರ ಕೃಷಿಕ ಮಲವಂತಿಗೆ ಗ್ರಾಮದ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ (70 ) ರವರು ನಿಧನರಾದರು.

ದ.ಕ , ಉಡುಪಿ ಜಿಲ್ಲೆಗಳಲ್ಲಿ ಹಲವಾರು ಕಂಬಳಗಳಲ್ಲಿ ಅಡ್ಡ ಹಲಗೆ ವಿಭಾಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಲೋಕಯ್ಯ ಗೌಡ ಅವರು ಹಲವಾರು ಬಾರಿ ಪ್ರಥಮ ಸ್ಥಾನ ಪಡೆದಿದ್ದರು. ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದ ಅವರು ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು. ಕಂಬಳ ಕ್ಷೇತ್ರದ ಗಣನೀಯ ಸೇವೆಯನ್ನು ಗುರುತಿಸಿ ಜಿಲ್ಲೆಯಾದ್ಯಂತ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪಟ್ಟಿದ್ದರು. ಪುರುಷ ಬಳಗವನ್ನು ಸ್ಥಾಪಿಸಿ , ಅದರ ಸ್ಥಾಪಕಧ್ಯಕ್ಷರಾಗಿ , ಇತ್ತೀಚಿನ ತನಕವೂ ತಂಡವನ್ನು ಮುನ್ನಡೆಸಿದ್ದರು. ಗ್ರಾಮದ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ದುಡಿದಿದ್ದ ಅವರು ಅತ್ಯಂತ ಸೌಮ್ಯ ಸ್ವಭಾವದಿಂದ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಲಕ್ಷ್ಮೀ , ಗಂಡು ಮಕ್ಕಳಾದ ನಾರಾಯಣ , ಸುರೇಶ್ , ಮುರಳೀಧರ್, ಹೆಣ್ಣು ಮಗಳಾದ ಸುಜಾತ ಸೇರಿದಂತೆ ಸಾವಿರಾರು ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya
error: Content is protected !!