September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

ಮಲವಂತಿಗೆ : ಹಿರಿಯ ಕಂಬಳ ಓಟಗಾರ , ಸಾಧಕ , ಪ್ರಗತಿಪರ ಕೃಷಿಕ ಮಲವಂತಿಗೆ ಗ್ರಾಮದ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ (70 ) ರವರು ನಿಧನರಾದರು.

ದ.ಕ , ಉಡುಪಿ ಜಿಲ್ಲೆಗಳಲ್ಲಿ ಹಲವಾರು ಕಂಬಳಗಳಲ್ಲಿ ಅಡ್ಡ ಹಲಗೆ ವಿಭಾಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಲೋಕಯ್ಯ ಗೌಡ ಅವರು ಹಲವಾರು ಬಾರಿ ಪ್ರಥಮ ಸ್ಥಾನ ಪಡೆದಿದ್ದರು. ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದ ಅವರು ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು. ಕಂಬಳ ಕ್ಷೇತ್ರದ ಗಣನೀಯ ಸೇವೆಯನ್ನು ಗುರುತಿಸಿ ಜಿಲ್ಲೆಯಾದ್ಯಂತ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪಟ್ಟಿದ್ದರು. ಪುರುಷ ಬಳಗವನ್ನು ಸ್ಥಾಪಿಸಿ , ಅದರ ಸ್ಥಾಪಕಧ್ಯಕ್ಷರಾಗಿ , ಇತ್ತೀಚಿನ ತನಕವೂ ತಂಡವನ್ನು ಮುನ್ನಡೆಸಿದ್ದರು. ಗ್ರಾಮದ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ದುಡಿದಿದ್ದ ಅವರು ಅತ್ಯಂತ ಸೌಮ್ಯ ಸ್ವಭಾವದಿಂದ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಲಕ್ಷ್ಮೀ , ಗಂಡು ಮಕ್ಕಳಾದ ನಾರಾಯಣ , ಸುರೇಶ್ , ಮುರಳೀಧರ್, ಹೆಣ್ಣು ಮಗಳಾದ ಸುಜಾತ ಸೇರಿದಂತೆ ಸಾವಿರಾರು ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ನೀಟ್ ಟಾಪರ್ ಮೌರ್ಯ ವೈ.ಡಿ.ಗೆ ಅದ್ಧೂರಿ ಸನ್ಮಾನ

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya
error: Content is protected !!